ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರ ದುರ್ಮರಣ

ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ದುರ್ಮರಣಕ್ಕೀಡಾದ ಘಟನೆ ನಗರದ ಮಾರತ್ತಹಳ್ಳಿ ಪೊಲೀಸ್ ಠಾಣಾ  ವ್ಯಾಪ್ತಿಯಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ದುರ್ಮರಣಕ್ಕೀಡಾದ ಘಟನೆ ನಗರದ ಮಾರತ್ತಹಳ್ಳಿ ಪೊಲೀಸ್ ಠಾಣಾ  ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು ಜಂಬಣ್ಣ (37) ಭೀಮರಾವ್ (47) ಎಂದು ಗುರುತಿಸಲಾಗಿದ್ದು, ಅವರು ಗುಲ್ಬರ್ಗಾ ಮೂಲದವರು ಎನ್ನಲಾಗಿದೆ.

ಕೆಲಸ ಮಾಡುತ್ತಿದ್ದ ವೇಳೆ ಒಂದೇ ಸಮನೆ ಮಣ್ಣು ಕುಸಿದಿದ್ದು, ಏಳು ಕಾರ್ಮಿಕರು ಸಿಲುಕಿ ಹಾಕಿಕೊಂಡಿದ್ದರು. ಕೂಡಲೇ
ಇತರೆ ಐವರು ಕಾರ್ಮಿಕರನ್ನು ರಕ್ಷಿಸಲಾಗಿದೆ. ಆದರೆ, ಇಬ್ಬರು ಮಣ್ಣಿನಡಿ ಸಿಲುಕಿಕೊಂಡು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com