ಕೃಷಿ ಭೂಮಿಯಲ್ಲಿ 67ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ದೇವೇಗೌಡ ದಂಪತಿ! ವಿಡಿಯೋ

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ, ಚೆನ್ನಮ್ಮ ಅವರ ದಾಂಪತ್ಯ ಜೀವನಕ್ಕೆ 67ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮ. ಈ ಹಿನ್ನೆಲೆಯಲ್ಲಿ ಸೋಮವಾರ ರಾಮನಗರದ ಕೇತಗಾನಹಳ್ಳಿಯಲ್ಲಿರುವ ಎಚ್.ಡಿ. ಕುಮಾರಸ್ವಾಮಿ ಅವರ ಕೃಷಿಭೂಮಿಯಲ್ಲಿ ತೆಂಗಿನ ಸಸಿನೆಟ್ಟು ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ.
ತೆಂಗಿನ ಸಸಿ ನೆಟ್ಟ ದೇವೇಗೌಡ ದಂಪತಿ
ತೆಂಗಿನ ಸಸಿ ನೆಟ್ಟ ದೇವೇಗೌಡ ದಂಪತಿ

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ, ಚೆನ್ನಮ್ಮ ಅವರ ದಾಂಪತ್ಯ ಜೀವನಕ್ಕೆ 67ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮ. ಈ ಹಿನ್ನೆಲೆಯಲ್ಲಿ ಸೋಮವಾರ ರಾಮನಗರದ ಕೇತಗಾನಹಳ್ಳಿಯಲ್ಲಿರುವ ಎಚ್.ಡಿ. ಕುಮಾರಸ್ವಾಮಿ ಅವರ ಕೃಷಿಭೂಮಿಯಲ್ಲಿ ತೆಂಗಿನ ಸಸಿನೆಟ್ಟು ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಎಚ್.ಡಿ. ಕುಮಾರಸ್ವಾಮಿ, ಹಸಿರಿನಿಂದ ಕಂಗೊಳಿಸುತ್ತಾ, ಸಂಭ್ರಮಿಸುತ್ತಿರುವ ತೋಟವನ್ನು ಕಂಡು 'ರೈತನ ಮಗ' ದೇವೇಗೌಡರು ಅಷ್ಟೇ ಸಂಭ್ರಮಪಟ್ಟರು ಎಂದಿದ್ದಾರೆ.

ದಂಪತಿ ಈ ಶುಭ ದಿನ ನನ್ನ ಪ್ರೀತಿಯ ತೋಟಕ್ಕೆ ಆಗಮಿಸಿ, ಕಲ್ಪವೃಕ್ಷವಾದ ತೆಂಗಿನ ಸಸಿ ನೆಟ್ಟಿದ್ದು ಅವರ ಮಗನಾದ ನನ್ನನ್ನು ಭಾವಪರವಶನಾಗುವಂತೆ ಮಾಡಿತು. ಈ ಅಪರೂಪದ ಸನ್ನಿವೇಶ ಸೃಷ್ಟಿಸಿದ ದೇವರಿಗೆ ನನ್ನ ನಮನಗಳು. ದೇವೇಗೌಡ ದಂಪತಿಗೆ ಶುಭಾಶಯಗಳು ಎಂದು ಕುಮಾರಸ್ವಾಮಿ ಬರೆದುಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com