ಮನಃ ಪರಿವರ್ತನಾ ಕೇಂದ್ರದಲ್ಲಿ ಜೂಜಾಡುತ್ತಿದ್ದ 14 ಜನರ ಬಂಧನ

ಮನಃ ಪರಿವರ್ತನಾ ಕೇಂದ್ರದ ಮೇಲೆ ಬ್ಯಾಡರಹಳ್ಳಿ ಪೊಲೀಸರು ದಾಳಿ ಮಾಡಿ ಜೂಜಾಡುತ್ತಿದ್ದ 14 ಜನರನ್ನು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಮನಃ ಪರಿವರ್ತನಾ ಕೇಂದ್ರದ ಮೇಲೆ ಬ್ಯಾಡರಹಳ್ಳಿ ಪೊಲೀಸರು ದಾಳಿ ಮಾಡಿ ಜೂಜಾಡುತ್ತಿದ್ದ 14 ಜನರನ್ನು ಬಂಧಿಸಿದ್ದಾರೆ.

ಬೆಂಗಳೂರಿನ ತುಂಗಾನಗರದಲ್ಲಿರುವ ಶ್ರೀ ಮಹದೇಶ್ವರ ಡಿ ಅಡಿಕ್ಷನ್ ಸೆಂಟರ್ ಮೇಲೆ ಪೊಲೀಸರು ದಾಳಿ ಮಾಡಿ 28 ಸಾವಿರ ರೂ. ವಶಪಡಿಸಿಕೊಂಡಿದ್ದಾರೆ. ಹೊನ್ನಪ್ಪ ಎಂಬಾತನಿಗೆ ಸೇರಿದ ಡಿ ಅಡಿಕ್ಷನ್ ಸೆಂಟರ್​ ಇದಾಗಿದ್ದು, ಅವರ ಸಂಬಂಧಿ ಅಶೋಕ್ ಈ ಸೆಂಟರ್​ನಲ್ಲಿ ಮ್ಯಾನೇಜರ್ ಆಗಿ  ಕಾರ್ನಿರ್ವಹಿಸುತ್ತಿದ್ದರು. ಸದ್ಯ ಅಶೋಕ್ ಮತ್ತು ಹೊನ್ನಪ್ಪರನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.  

ಇನ್ನು ಈ ಸಂದರ್ಭದಲ್ಲಿ ಗ್ಯಾಂಬಲಿಂಗ್​ನಲ್ಲಿ ತೊಡಗಿದ್ದ 14 ಮಂದಿ ಪತ್ತೆಯಾಗಿದ್ದು, ಕೆಪಿ ಆ್ಯಕ್ಟ್ ಹಾಗೂ ಎನ್​ಡಿಎಂಎ ಆ್ಯಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com