ದೇಶದಲ್ಲೇ ಮೊದಲು: ಬೆಂಗಳೂರಿನಲ್ಲಿ ವೈರಸ್ ನಾಶಕ್ಕೆ ಲಘು ವಿಮಾನದಿಂದ ಸೋಂಕು ನಿವಾರಕ ದ್ರಾವಣ ಸಿಂಪಡಣೆ

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಕೊಂಚ ಕಡಿಮೆಯಾಗುತ್ತಿದ್ದು ಇದರ ಮಧ್ಯೆ ಗಾಳಿಯಲ್ಲಿ ಅಲ್ಪ ಕಾಲ ತೇಲುವ ಕೊರೋನಾ ವೈರಸ್ ನಾಶಕ್ಕೆ ಬಿಬಿಎಂಪಿ ಮುಂದಾಗಿದ್ದು ಲಘು ವಿಮಾನಗಳ ಮೂಲಕ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಮಾಡಲು ಪ್ಲಾನ್ ಮಾಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಕೊಂಚ ಕಡಿಮೆಯಾಗುತ್ತಿದ್ದು ಇದರ ಮಧ್ಯೆ ಗಾಳಿಯಲ್ಲಿ ಅಲ್ಪ ಕಾಲ ತೇಲುವ ಕೊರೋನಾ ವೈರಸ್ ನಾಶಕ್ಕೆ ಬಿಬಿಎಂಪಿ ಮುಂದಾಗಿದ್ದು ಲಘು ವಿಮಾನಗಳ ಮೂಲಕ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಮಾಡಲು ಪ್ಲಾನ್ ಮಾಡಿದೆ. 

ದೇಶದಲ್ಲೇ ಇದು ಮೊದಲ ವಿನೂತನ ಪ್ರಯತ್ನವಾಗಿದ್ದು ಏರಿಯಲ್ ವರ್ಕ್ಸ್ ಏರೋ ಎಲ್ಎಲ್ ಪಿ ಸಂಸ್ಥೆಯ ಜೊತೆ ದ್ರಾವಣ ಸಿಂಪಡಿಸುವ ಪ್ರಾಯೋಗಿಕ ಕಾರ್ಯಾಚರಣೆ ಯೋಜನೆಗೆ ಇಂದು ಚಾಲನೆ ನೀಡಲಾಯಿತು. 

ಬೆಂಗಳೂರಿನ ಕಲಾಸಿಪಾಳ್ಯ, ಕೆಆರ್ ಮಾರುಕಟ್ಟೆ ಮತ್ತು ಶಿವಾಜಿನಗರ ಪ್ರದೇಶಗಳಲ್ಲಿ ಪ್ರಾಯೋಗಿಕವಾಗಿ ಮೂರು ದಿನಗಳ ಕಾಲ ಏರ್ ಸ್ಪ್ರೇ ಮಾಡಲಾಗುತ್ತದೆ. ಇನ್ನು ಇದನ್ನು ಎಲ್ಎಲ್ ಸಿ ಉಚಿತವಾಗಿ ಸಿಂಪಡಣೆ ಮಾಡುತ್ತಿದೆ. 

ಸೋಮವಾರದಿಂದ ಮೂರು ದಿನಗಳ ಕಾಲ ಬೆಳಗ್ಗೆ 8ರಿಂದ 10 ಗಂಟೆಯವರೆಗೆ ಮಾರುಕಟ್ಟೆ ಸ್ಥಳಗಳಲ್ಲಿ ಸೋಂಕು ನಿವಾರಕ ಸಾವಯವ ದ್ರಾವಣವನ್ನು ಸಿಂಪಡಣೆ ಮಾಡಲಾಗುತ್ತದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com