ಪ್ರೋತ್ಸಾಹ ಧನವಿಲ್ಲ, ಉದ್ಯೋಗ ಭದ್ರತೆಯೂ ಇಲ್ಲ; ಪ್ರಧಾನಿ ಮೋದಿಗೆ ಸರ್ಕಾರಿ ಗುತ್ತಿಗೆ ಕಾರ್ಮಿಕರ ಪತ್ರ

ಕೋವಿಡ್-19 ಸಾಂಕ್ರಾಮಿಕ ಸಮರದಲ್ಲಿ ಮುಂಚೂಣಿ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿರುವ ಕರ್ನಾಟಕ ರಾಜ್ಯ ಆರೋಗ್ಯ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘದ (ಕೆಎಸ್‌ಎಚ್‌ಸಿಒಇಎ) ಸದಸ್ಯರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದು, ತಮ್ಮ ಸಮಸ್ಯೆಗಳನ್ನು ಈಡೇರಿಸುವಂತೆ ಕೋರಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ಸಮರದಲ್ಲಿ ಮುಂಚೂಣಿ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿರುವ ಕರ್ನಾಟಕ ರಾಜ್ಯ ಆರೋಗ್ಯ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘದ (ಕೆಎಸ್‌ಎಚ್‌ಸಿಒಇಎ) ಸದಸ್ಯರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದು, ತಮ್ಮ ಸಮಸ್ಯೆಗಳನ್ನು ಈಡೇರಿಸುವಂತೆ ಕೋರಿದ್ದಾರೆ.

ಕೋವಿಡ್-19 ಸಾಂಕ್ರಾಮಿಕ ಸಮರದಲ್ಲಿ ಮುಂಚೂಣಿ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿರುವ ತಮಗೆ ಕೋವಿಡ್ ಪ್ರೋತ್ಸಾಹ ಧನದ ಕೊರತೆ, ವೈದ್ಯಕೀಯ ವೆಚ್ಚ ಮರುಪಾವತಿ, ಉದ್ಯೋಗ ಭದ್ರತೆ ಸೇರಿದಂತೆ ಹಲವು ಸಮಸ್ಯೆಗಳನ್ನು ಪತ್ರದ ಮೂಲಕ ಪ್ರಧಾನಿ ನರೇಂದ್ರಮೋದಿ ಅವರ ಗಮನಕ್ಕೆ ತರುವ  ಪ್ರಯತ್ನ ಮಾಡಿದ್ದಾರೆ. ಕ್ಲಿನಿಕಲ್ ಕೇಡರ್‌ಗಳಿಗೆ ಕೋವಿಡ್-ರಿಸ್ಕ್ ಪ್ರೋತ್ಸಾಹಕಗಳನ್ನು ಮಂಜೂರು ಮಾಡಲು ರಾಜ್ಯ ಸರ್ಕಾರ ಈ ಹಿಂದೆ ಒಪ್ಪಿಕೊಂಡಿತ್ತು. ಆದರೆ ಎಲ್ಲಾ ಗುತ್ತಿಗೆ ಮತ್ತು ಹೊರಗುತ್ತಿಗೆ ಉದ್ಯೋಗಿಗಳನ್ನು ಈ ಸೌಲಭ್ಯಗಳಿಂದ ಹೊರಗಿಡಲಾಗಿದೆ ಎಂದು ಕೆಎಸ್‌ಎಚ್‌ಸಿಒಇಎ ಪತ್ರದಲ್ಲಿ ಉಲ್ಲೇಖಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದ ಪತ್ರದಲ್ಲಿ, ನಿಯಮಿತ ಆರೋಗ್ಯ ಇಲಾಖೆಯ ಸಿಬ್ಬಂದಿಗಳಂತೆ ನಾವೂ ಸಹ ಕೋವಿಡ್‌-19 ಸಾಂಕ್ರಾಮಿಕದಲ್ಲಿ ಕೋವಿಡ್ ಆರೈಕೆ ಕೇಂದ್ರ, ಜಿಲ್ಲಾ ಆರೋಗ್ಯ ಮತ್ತು ವ್ಯಾಕ್ಸಿನೇಷನ್ ಕೇಂದ್ರಗಳಲ್ಲಿ ಜೀವ ಪಣಕ್ಕಿಟ್ಟು ಸೇವೆ ಸಲ್ಲಿಸುತ್ತಿದ್ದೇವೆ. ಆದರೆ ರಾಜ್ಯ ಸರ್ಕಾರವು  ಕೋವಿಡ್ ವೈದ್ಯಕೀಯ ವೆಚ್ಚವನ್ನು ಸಾಮಾನ್ಯ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಮಾತ್ರ ಮರುಪಾವತಿ ಮಾಡುವುದಾಗಿ ಘೋಷಿಸಿದೆ ಎಂದು ಹೇಳಿದ್ದಾರೆ.

ಅಂತೆಯೇ ರಾಜ್ಯದ ವಿಶೇಷ ಕೋವಿಡ್ ಪ್ರೋತ್ಸಾಹ ನೀಡಿಕೆ ಪಟ್ಟಿಗಳಲ್ಲಿ ಗ್ರೂಪ್ ಡಿ ಸಿಬ್ಬಂದಿ, ಸಲಹೆಗಾರರು, ಆಂಬ್ಯುಲೆನ್ಸ್ ಚಾಲಕರು ಇಲ್ಲ. ಅವರು ಗುತ್ತಿಗೆ ಸಿಬ್ಬಂದಿಗಳಾಗಿರುವುದರಿಂದ ಅವರಿಗೆ ಉದ್ಯೋಗ ಭದ್ರತೆ ಇಲ್ಲದಿರುವುದರಿಂದ, ಅವರೂ ಸಹ 60 ವರ್ಷ ತುಂಬುವವರೆಗೆ ಉದ್ಯೋಗದಲ್ಲಿರಬೇಕು ಎಂದು  ಸಂಘದ ಸದಸ್ಯರು ಹೇಳಿದ್ದಾರೆ. ಹೀಗಾಗಿ ಅವರಿಗೂ ಸಾಮಾನ್ಯ ಸರ್ಕಾರಿ ಆರೋಗ್ಯ ಸಿಬ್ಬಂದಿಯಂತೆ ಶೇ.25 ರಷ್ಟು ವೇತನ ಹೆಚ್ಚಳ ನೀಡುವಂತೆ ಪತ್ರದಲ್ಲಿ ಕೋರಲಾಗಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com