ವಿಜಯಪುರ: ಭೀಮಾ ನದಿಯಲ್ಲಿ ನಾಲ್ವರು ಮಕ್ಕಳು ನೀರುಪಾಲು, ಓರ್ವ ಬಾಲಕಿ ಮೃತದೇಹ ಪತ್ತೆ

ನದಿಯಲ್ಲಿಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆ ಮಹಾರಾಷ್ಟ್ರದ  ಗಡಿಯ  ಲವಗಿ ಗ್ರಾಮದಲ್ಲಿ ನಡೆದಿದೆ. 
ನೀರುಪಾಲಾದ ಮಕ್ಕಳು
ನೀರುಪಾಲಾದ ಮಕ್ಕಳು

ವಿಜಯಪುರ: ನನದಿಯಲ್ಲಿಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆ ಮಹಾರಾಷ್ಟ್ರದ  ಗಡಿಯ  ಲವಗಿ ಗ್ರಾಮದಲ್ಲಿ ನಡೆದಿದೆ. ನಿನ್ನೆ ಸಂಜೆ ಮಕ್ಕಳು ಭೀಮಾನದಿಯಲ್ಲಿ ಈಜಲು ತೆರಳಿದ್ದವರು ನಾಪತ್ತೆಯಾಗಿದ್ದು ಇದುವರೆಗೆ ಓರ್ವ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಇನ್ನೂ ಮೂವರಿಗಾಗಿ ಶೋಧ ನಡೆದಿದೆ.

ಲವಗಿ ಗ್ರಾಮದ ಶಿವಾನಂದ ಪಾರ್ಶೆಟ್ಟಿ ಅವರ ಮಕ್ಕಳಾದ ಆರತಿ(13), ವಿಠ್ಠಲ(10) ಹಾಗೂ ಶಿವಾಜಿ ತಾನವಡೆ ಎಂಬುವವರ ಮಕ್ಕಳಾದ ಸಮೀಕ್ಷಾ(14), ಅರ್ಪಿತಾ(13)  ನಿನ್ನೆ ಸಂಜೆ ನದಿಯಲ್ಲಿ ಈಜಲು ತೆರಳಿದ್ದರು. ಇವರ ಪೈಕಿ ಆರತಿ ಮೃತದೇಹ ಮಾತ್ರ ಸಿಕ್ಕಿದ್ದು ಇನ್ನೂ ಮೂವರು ಪತ್ತೆಯಾಗಿಲ್ಲ.

ಮನೆಯವರು ಕೆಲಸದಲ್ಲಿ ತೊಡಗಿದ್ದ ವೇಳೆ ಮಕ್ಕಳು ನದಿಯತ್ತ ತೆರಳಿದ್ದಾರೆ. ಆ ವೇಳೆ ನದಿಯಲ್ಲಿನ ನೀರಿನ ಸೆಳವಿಗೆ ಸಿಕ್ಕು ಕೊಚ್ಚಿ ಹೋಗಿದ್ದಾರೆಂದು ಶಂಕೆ ವ್ಯಕ್ತವಾಗಿದೆ.

ಘಟನೆ ಸಂಬಂಧ ಮಹಾರಾಷ್ಟ್ರದ ಮಂದ್ರೂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com