ಅಪ್ಪು ಹೋದ ಜಾಗಕ್ಕೆ ನಾನು ಹೋಗ್ತೇನೆ: ಡೆತ್ ನೋಟ್ ಬರೆದು ತುಮಕೂರಿನಲ್ಲಿ ಪುನೀತ್ ಅಭಿಮಾನಿ ಆತ್ಮಹತ್ಯೆ

ನಟ ಪುನೀತ್ ರಾಜ್​ಕುಮಾರ್ ಸಾವನ್ನು ಸಹಿಸಿಕೊಳ್ಳಲಾಗದ ತುಮಕೂರಿನ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪುನೀತ್ ರಾಜಕುಮಾರ್
ಪುನೀತ್ ರಾಜಕುಮಾರ್

ತುಮಕೂರು: ನಟ ಪುನೀತ್ ರಾಜ್​ಕುಮಾರ್ ಸಾವನ್ನು ಸಹಿಸಿಕೊಳ್ಳಲಾಗದ ತುಮಕೂರಿನ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಪ್ಪು ಹೋದ ಜಾಗಕ್ಕೆ ನಾನು ಹೋಗುತ್ತೇನೆ" ಎಂದು ಡೆತ್​ನೋಟ್​ ಬರೆದಿಟ್ಟು, ಪುನೀತ್ ರಾಜ್‍ಕುಮಾರ್ ಅಭಿಮಾನಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ತುಮಕೂರಿನ ಭರತ್ (20) ಆತ್ಮಹತ್ಯೆಗೆ ಶರಣಾದ ಅಭಿಮಾನಿ. ತುಮಕೂರು ತಾಲೂಕಿನ ಹೆಬ್ಬೂರಿನ ಕೋಡಿಪಾಳ್ಯದಲ್ಲಿ ಈ ಘಟನೆ ನಡೆದಿದೆ. "ನಾನು ಅಪ್ಪು ಅವರ ಅಭಿಮಾನಿಯಾಗಿದ್ದು, ಅವರ ಸಾವನ್ನು ಸಹಿಸಲಾಗುತ್ತಿಲ್ಲ" ಎಂದು ಡೆತ್​ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ.

ಗಾರೆ ಕೆಲಸ ಮಾಡಿಕೊಂಡಿದ್ದ ಭರತ್, ಪುನೀತ್ ಇಲ್ಲದೆ ಇರೋದಕ್ಕೆ ಆಗುತ್ತಿಲ್ಲ. ಅವರು ಹೋದ ಜಾಗಕ್ಕೆ ನಾನೂ ಹೋಗುತ್ತೇನೆ. ನನ್ನ ಕಣ್ಣುಗಳನ್ನು ದಾನ ಮಾಡಿ ಎಂದು ಡೆತ್​ನೋಟ್ ಬರೆದಿಟ್ಟು ಕೋಡಿಪಾಳ್ಯದ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾನೆ. ಹೆಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com