ರೂಪದರ್ಶಿಯರ ಸಾವು: ಪೊಲೀಸರಿಂದ ಹೊಟೇಲ್ ಮತ್ತು ಮಾರ್ಗ ಪರಿಶೀಲನೆ

ಅಪಘಾತ ನಡೆದ ಪ್ರದೇಶದಲ್ಲಿ ರಸ್ತೆ ಗುಂಡಿಗಳು ಸೇರಿದಂತೆ ಯಾವುದೇ ತೊಂದರೆ ಇರಲಿಲ್ಲ ಎಂದು ಕೇರಳ ಸಾರಿಗೆ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಮಿಸ್ ಸೌತ್ ಇಂಡಿಯಾ ಆನ್ಸಿ, ಮಾಜಿ ಮಿಸ್ ಕೇರಳ ರನ್ನರ್ ಅಪ್ ಅಂಜನಾ
ಮಿಸ್ ಸೌತ್ ಇಂಡಿಯಾ ಆನ್ಸಿ, ಮಾಜಿ ಮಿಸ್ ಕೇರಳ ರನ್ನರ್ ಅಪ್ ಅಂಜನಾ

ಕೊಚ್ಚಿ: ರಸ್ತೆ ಅಪಘಾತದಲ್ಲಿ ಮೃತಪಟ್ಟ ಇಬ್ಬರು ರೂಪದರ್ಶಿಯರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅವರು ತಂಗಿದ್ದ ಹೊಟೇಲ್ ಮತ್ತು ಅವರು ಪ್ರಯಾಣಿಸುತ್ತಿದ್ದ ಮಾರ್ಗದ ಪರಿಶೀಲನೆ ನಡೆಸಿದ್ದಾರೆ. 

ಸೋಮವಾರ ಬ್ಬರು ರೂಪದರ್ಶಿಯರು ಪ್ರಯಾಣಿಸುತ್ತಿದ್ದ ಕಾರು ಕೊಚ್ಚಿಯ ವೈಟಿಲ್ಲ ಎಂಬಲ್ಲಿ ಮರವೊಂದಕ್ಕೆ ಗುದ್ದಿ ಅಪಘಾತಕ್ಕೀಡಾಗಿತ್ತು. ಮುಂಜಾನೆ 1.30ರ ಸುಮಾರಿಗೆ ಸಂಭವಿಸಿದ್ದ ಈ ಅಪಘಾತದ ಕುರಿತಾಗಿ ಹಲವು ಊಹಾಪೋಹಗಳು ಹುಟ್ಟಿಕೊಂಡಿದ್ದವು. 

ಹೊಟೆಲೊಂದರಲ್ಲಿ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಆ ರೂಪದರ್ಶಿಗಳು ತ್ರಿಸೂರಿಗೆ ವಾಪಸಾಗುತ್ತಿದ್ದರು. ಅಪಘಾತ ನಡೆದ ಸ್ಥಳದಲ್ಲಿ ಸಿಸಿ ಟಿವಿ ಕಾರ್ಯಚರಿಸುತ್ತಿಲ್ಲವಾದ್ದರಿಂದ ಸುತ್ತಮುತ್ತಲಿನ ಅಂಗಡಿ ಮತ್ತಿತರ ಖಾಸಗಿಯವರ ಸಿಸಿ ಟಿವಿಗಳ ವಿಡಿಯೋಗಲನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. 

ಅಪಘಾತ ನಡೆದ ಪ್ರದೇಶದಲ್ಲಿ ರಸ್ತೆ ಗುಂಡಿಗಳು ಸೇರಿದಂತೆ ಯಾವುದೇ ತೊಂದರೆ ಇರಲಿಲ್ಲ ಎಂದು ಕೇರಳ ಸಾರಿಗೆ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಅಪಘಾತಕ್ಕೆ ವೇಗ ಚಾಲನೆಯೇ ಕಾರಣ ಇರಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com