ಚಿತ್ರದುರ್ಗ: ಹಿರಿಯೂರು ತಾಲೂಕು ಕೋಡಿಹಳ್ಳಿ ಶ್ರೀ ಆದಿಜಾಂಬವ ಮಹಾಸಂಸ್ಥಾನ ಮಠದ ಹಿರಿಯ ಶ್ರೀಗಳಾದ ಮಾರ್ಕಾಂಡಮುನಿ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ ಎಂದು ತಿಳಿದುಬಂದಿದೆ.
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಾಮಿಜಿ ಇಂದು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಶ್ರೀಗಳ ನಿಧನಕ್ಕೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವರಾದ ಎ ನಾರಾಯಣಸ್ವಾಮಿ ಅವರು ಟ್ವಿಟರ್ ನಲ್ಲಿ ಕಂಬನಿ ಮಿಡಿದಿದ್ದು, 'ಹಿರಿಯೂರು ತಾಲೂಕು ಕೋಡಿಹಳ್ಳಿ ಶ್ರೀ ಆದಿಜಾಂಬವ ಮಹಾಸಂಸ್ಥಾನ ಮಠದ ಹಿರಿಯ ಶ್ರೀಗಳಾದ ಶ್ರೀ ಶ್ರೀ ಶ್ರೀ ಪರಮಪೂಜ್ಯ ಮಾರ್ಕಾಂಡಮುನಿ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಸಮಾಜದ ಹಿರಿಯ ಶ್ರೀಗಳ ಆತ್ಮದ ಚಿರಶಾಂತಿಗೆ ಪ್ರಾರ್ಥಿಸುತ್ತ ಶ್ರೀಗಳ ಅನನ್ಯವಾದ ಸಮಾಜಸೇವೆ ನಮಗೆ ಸದಾ ಆದರ್ಶವಾಗಿರಲಿ ಎಂದು ನನ್ನ ನಮನಗಳನ್ನು ಸಲ್ಲಿಸುತ್ತೇನೆ' ಎಂದು ಟ್ವೀಟ್ ಮಾಡಿದ್ದಾರೆ.
Advertisement