ಎಲ್ಲೆಡೆ ದೀಪಾವಳಿ ಸಂಭ್ರಮ: ಜನತೆಗೆ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಹಾಗೂ ಗಣ್ಯರಿಂದ ಶುಭಾಶಯ

ದೇಶದಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯಾತಿ ಗಣ್ಯರು ಗುರುವಾರ ಶುಭಾಶಯಗಳನ್ನು ಕೋರಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ದೇಶದಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯಾತಿ ಗಣ್ಯರು ಗುರುವಾರ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು ದೀಪಾವಳಿಯ ಈ ಶುಭ ಸಂದರ್ಭದಲ್ಲಿ ದೇಶವಾಸಿಗಳಿಗೆ ಹಬ್ಬದ ಶುಭಾಶಯಗಳು. ಈ ಬೆಳಕಿನ ಹಬ್ಬವು ನಿಮ್ಮ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಅದೃಷ್ಟವನ್ನು ತರಲಿ ಎಂದು ನಾನು ಬಯಸುತ್ತೇನೆ. ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿ ವಿಶ್ವದಾದ್ಯಂತ ಇರುವ ಎಲ್ಲಾ ನಮ್ಮ ಪ್ರೀತಿಯ ಕನ್ನಡಿಗರಿಗೆ ಅತ್ಯಂತ ಸಂತೋಷ ಮತ್ತು ಸಮೃದ್ಧ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಈ 'ಬೆಳಕಿನ ಹಬ್ಬ' ನಿಮ್ಮೆಲ್ಲರ ಜೀವನವನ್ನು ಆರೋಗ್ಯ, ಸಂಪತ್ತು, ಸಂತೋಷ ಮತ್ತು ಯಶಸ್ಸಿನಿಂದ ಬೆಳಗಲಿ, ನೀವು ಎಲ್ಲಿಯೇ ಇದ್ದರೂ ನಮ್ಮ ಭೂಮಿಗೆ ಹೆಚ್ಚಿನ ಕೀರ್ತಿಯನ್ನು ತನ್ನಿ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com