ಮಾಗಡಿ ಬಳಿ ಕಾರು ಅಪಘಾತದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿ ಬಲಿ

ಅಂಬ್ಯುಲೆನ್ಸ್ ಒಂದನ್ನು ಹಿಂದಿಕ್ಕುವ ಭರದಲ್ಲಿ ವಿದ್ಯುತ್ ಕಂಬವೊಂದಕ್ಕೆ ಕಾರು ಡಿಕ್ಕಿ ಹೊಡೆದ ನಂತರ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದು, ಇತರ ಏಳು ಮಂದಿ ಗಾಯಗೊಂಡಿರುವ ಘಟನೆ ಮಾಗಡಿ ಸಮೀಪ ಭಾನುವಾರ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಅಂಬ್ಯುಲೆನ್ಸ್ ಒಂದನ್ನು ಹಿಂದಿಕ್ಕುವ ಭರದಲ್ಲಿ ವಿದ್ಯುತ್ ಕಂಬವೊಂದಕ್ಕೆ ಕಾರು ಡಿಕ್ಕಿ ಹೊಡೆದ ನಂತರ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದು, ಇತರ ಏಳು ಮಂದಿ ಗಾಯಗೊಂಡಿರುವ ಘಟನೆ ಮಾಗಡಿ ಸಮೀಪ ಭಾನುವಾರ ನಡೆದಿದೆ. ಸಾವನದುರ್ಗಕ್ಕೆ ಚಾರಣಕ್ಕೆ ತೆರಳುತ್ತಿರುವಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಮೃತಪಟ್ಟವರನ್ನು ಆಕಾಂಕ್ಷಾ ಗುಪ್ತಾ (19) ಎಂದು ಗುರುತಿಸಲಾಗಿದೆ. ಜಮ್ಮುವಿನ ಉದ್ದಮ್ ಪುರ ನಿವಾಸಿಯಾದ ಈತ ಬಸವನಗುಡಿಯ ಖಾಸಗಿ ಕಾಲೇಜ್ ವೊಂದರಲ್ಲಿ ಐದನೇ ಸೆಮಿಸ್ಟರ್ ಎಂಜಿನಿಯರಿಂಗ್ ವಿದ್ಯಾರ್ಥಿ ಎನ್ನಲಾಗಿದೆ. 

ಘಟನೆಯಲ್ಲಿ ಗಾಯಗೊಂಡಿರುವ ಅಶಿಶ್ ರಾಜ್, ದಿವ್ಯಾಂಶ್, ಅಶುತೋಷ್, ದರ್ಶನ್, ಯಶೋವರ್ಧನ್ ಸಿಂಗ್, ಭವ್ಯಾ ಮತ್ತು ವಿಲಿಯಮ್ಸ್ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇವರೆಲ್ಲರೂ ಕೂಡ ವಿದ್ಯಾರ್ಥಿಗಳು ಎಂದು ಪೊಲೀಸರು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com