ನಟ ಪುನೀತ್ ರಾಜ್‌ಕುಮಾರ್ ನಿಧನಕ್ಕೆ ರಜನಿಕಾಂತ್ ಸಂತಾಪ; ಅಪ್ಪು ಅಭಿಮಾನಿಗಳ ಆಕ್ರೋಶ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ನಟ ರಜನಿಕಾಂತ್ ವಿರುದ್ಧ ಅಪ್ಪು ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ನಟ ರಜನಿಕಾಂತ್
ನಟ ರಜನಿಕಾಂತ್

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ನಟ ರಜನಿಕಾಂತ್ ವಿರುದ್ಧ ಅಪ್ಪು ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪುನೀತ್​ ರಾಜ್​ಕುಮಾರ್​ ಇಹಲೋಕ ತ್ಯಜಿಸಿದ ಸಂದರ್ಭದಲ್ಲಿ ರಜನಿಕಾಂತ್​ ಅವರು ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಹಾಗಾಗಿ ಅವರು ಬೆಂಗಳೂರಿಗೆ ಬರಲು ಸಾಧ್ಯವಾಗಿರಲಿಲ್ಲ. ಈಗ ಅವರು ಚೇತರಿಸಿಕೊಂಡಿದ್ದು, ಪುನೀತ್​ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಆದರೆ, ಇದಕ್ಕೆ ಮಗಳ ಹೂಟೆ ಆ್ಯಪ್'ನ್ನು ರಜನಿಕಾಂತ್ ಬಳಕೆ ಮಾಡಿರುವುದಕ್ಕೆ ರಜನಿಕಾಂತ್ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿವೆ

ಪುತ್ರಿಯ ಹೂಟೆ ಆ್ಯಪ್ ಆ್ಯಪ್​ ಪ್ರಮೋಟ್​ ಮಾಡುವ ಸಲುವಾಗಿ ಅದರಲ್ಲೇ ಪುನೀತ್​ಗೆ ರಜನಿಕಾಂತ್​ ಶ್ರದ್ಧಾಂಜಲಿ ಅರ್ಪಿಸಿದ್ದಾರೆಂದು ನೆಟ್ಟಿಗರು ವಿರೋಧ ವ್ಯಕ್ತಪಡಿಸಿದ್ದಾರೆ.

ರಜನಿಕಾಂತ್​ ಅವರಿಗೆ ದಾದಾಸಾಹೇಬ್​ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾದ ದಿನವೇ ಹೂಟೆ ಆ್ಯಪ್ ಲಾಂಚ್​ ಆಗಿತ್ತು. ಇದೊಂದು ವಾಯ್ಸ್​ ಬೇಸ್ಡ್​ ಸೋಶಿಯಲ್​ ಮೀಡಿಯಾ ಆ್ಯಪ್​ ಆಗಿದ್ದು, ಧ್ವನಿ ಮೂಲಕ ನಮ್ಮ ಆಲೋಚನೆಗಳನ್ನು ಹಂಚಿಕೊಳ್ಳಬಹುದು. ಇದರ ಮೂಲಕವೇ ಪುನೀತ್​ಗೆ ರಜನಿಕಾಂತ್​ ಶ್ರದ್ಧಾಂಜಲಿ ಅರ್ಪಿಸಿ, ಅದರ ಲಿಂಕ್​ ಅನ್ನು ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ.

‘ಪುನೀತ್​ ನನ್ನ ಕಣ್ಣಮುಂದೆ ಬೆಳೆದ ಪ್ರೀತಿಪಾತ್ರ ಮತ್ತು ಪ್ರತಿಭಾವಂತ ಮಗು. ಯಶಸ್ಸಿನ ಉತ್ತುಂಗದಲ್ಲಿ ಇರುವಾಗಲೇ ನಮ್ಮನ್ನು ಅವರು ಅಗಲಿದರು. ಕನ್ನಡ ಚಿತ್ರರಂಗಕ್ಕೆ ಇದು ತುಂಬಲಾರದ ನಷ್ಟ. ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಮಾತುಗಳೇ ಬರುತ್ತಿಲ್ಲ. ಪುನೀತ್​ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ರಜನಿಕಾಂತ್​ ಹೇಳಿದ್ದಾರೆ.

ಆದರೆ, ಇದಕ್ಕಾಗಿ ಅವರು ಬೇರೆಲ್ಲಾ ಸೋಶಿಯಲ್​ ಮೀಡಿಯಾ ಬಿಟ್ಟು, ಪುತ್ರಿಯ ಹೂಟೆ ಆ್ಯಪ್​ ಬಳಸಿರುವುದು ಸ್ವಾರ್ಥ ಮತ್ತು ಲಾಭದ ಉದ್ದೇಶದಿಂದ ಎಂದು ಜನರು ಟೀಕಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com