ಬೆಂಗಳೂರು: 4 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ- ಮಗಳ ವಿರುದ್ಧ ದೂರು!

ಕೋಟಿ ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ಲಾಕರ್ ನಲ್ಲಿಡುತ್ತೇನೆ ಎಂದು ಹೋಗಿದ್ದ ಮಗಳು ನಾಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಇದೊಂದು ಅಚ್ಚರಿಯ ಪ್ರಕರಣ. ಕೋಟಿ ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ಲಾಕರ್ ನಲ್ಲಿಡುತ್ತೇನೆ ಎಂದು ಹೋಗಿದ್ದ ಮಗಳು ನಾಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಲ್ಲದೆ, ಮಗಳ ವಿರುದ್ಧವೇ ಚಿನ್ನಾಭರಣ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.

ಬೆಂಗಳೂರಿನ ಜೆಪಿ ನಗರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ವಿಜಯಲಕ್ಷ್ಮೀ ಎಂಬವರು ತಮ್ಮ ಮಗಳು ತೇಜವಂತಿ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದಾರೆ.

ಕೆಲ ದಿನಗಳ ಹಿಂದೆ ವಿಜಯಲಕ್ಷ್ಮೀ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದರಂತೆ. ಈ ವೇಳೆ ಆಪರೇಷನ್ ಮಾಡಿಸಿಕೊಂಡ ತಾಯಿಯನ್ನು ಕ್ಷೇಮ ವಿಚಾರಿಸಿ ಪುತ್ರಿ ತೇಜವಂತಿ, ಚಿನ್ನಾಭರಣಗಳನ್ನು ಲಾಕರ್ ನಲ್ಲಿಡುವುದಾಗಿ ಹೇಳಿ ತೆಗೆದುಕೊಂಡು ಹೋಗಿದ್ದರಂತೆ.

ಆದರೆ ತಾಯಿ ದೂರಿನಲ್ಲಿ ಹೇಳಿರುವ ಪ್ರಕಾರ ಮಗಳು, ಚಿನ್ನಾಭರಣದೊಂದಿಗೆ ನಾಪತ್ತೆಯಾಗಿದ್ದಾರೆಂದು ಆರೋಪ ಮಾಡಿದ್ದಾರೆ. ಬರೋಬ್ಬರಿ 4 ಕೋಟಿ ರೂಪಾಯಿ ಮೌಲ್ಯದ ಏಳೂವರೆ ಕೆಜಿ ವಜ್ರ ಹಾಗೂ ಚಿನ್ನಾಭರಣ ವಂಚಿಸಿದ್ದಾಳೆಂದು ಮಗಳ ವಿರುದ್ಧವೇ ತಾಯಿ ದೂರು ದಾಖಲು ಮಾಡಿದ್ದಾರೆ.

ಈ ಕುರಿತು ಜೆಪಿ ನಗರ ಠಾಣೆಯಲ್ಲಿ ತಾಯಿ ವಿಜಯಲಕ್ಷ್ಮಿ ದೂರು ದಾಖಲು ಮಾಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಜೆಪಿ ನಗರ ಪೊಲೀಸರು ಮಗಳಾದ ತೇಜವಂತಿ ಶೋಧ ಕಾರ್ಯಕ್ಕೆ ಇಳಿದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com