ಬೆಂಗಳೂರಿಗೆ ಆಗಮಿಸಿದ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು

ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ನಾಲ್ಕು ದಿನಗಳ  ಭೇಟಿಗಾಗಿ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಿದರು. 
ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರನ್ನು ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರನ್ನು ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ನಾಲ್ಕು ದಿನಗಳ  ಭೇಟಿಗಾಗಿ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಿದರು. 

ಇಂದು ಸಂಜೆ ವಿಶೇಷ ವಿಮಾನದಲ್ಲಿ ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ  ವೆಂಕಯ್ಯ ನಾಯ್ಡು ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮತ್ತಿತರರು ಆತ್ಮೀಯವಾಗಿ ಬರಮಾಡಿಕೊಂಡರು.

ನಾಳೆ ಪಿಇಎಸ್ ವಿಶ್ವವಿದ್ಯಾನಿಲಯದ 6ನೇ ವರ್ಷದ ಘಟಿಕೋತ್ಸವದಲ್ಲಿ ಮತ್ತಿತರ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಉಪ ರಾಷ್ಟ್ರಪತಿ ಬುಧವಾರ ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ, ಯುಆರ್ ರಾವ್ ಉಪಗ್ರಹ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ನವದೆಹಲಿಗೆ ಮರಳಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com