ಬೆಂಗಳೂರಿನಲ್ಲಿ ಧಾರಾಕಾರ ಮಳೆ, ರಾಜಧಾನಿಯಲ್ಲಿ ಇನ್ನೂ ಎರಡು ದಿನ ವರುಣನ ಅಬ್ಬರ

ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಧಾರಾಕಾರ ಮಳೆಯಾಗಿದ್ದು, ದಿನದ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಾರ್ವಜನಿಕರು, ವಾಹನ ಸವಾರರು ಪರದಾಡುವಂತಾಯಿತು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಧಾರಾಕಾರ ಮಳೆಯಾಗಿದ್ದು, ದಿನದ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಾರ್ವಜನಿಕರು, ವಾಹನ ಸವಾರರು ಪರದಾಡುವಂತಾಯಿತು.

ವಿಧಾನಸೌಧ, ಕೆ.ಆರ್.ವೃತ್ತ, ಶಿವಾಜಿನಗರ, ಲಾಲ್ ಬಾಗ್ ರಸ್ತೆ, ಕೆಂಗಲ್ ಹನುಮಂತಯ್ಯ ರಸ್ತೆ, ಜಯನಗರ, ಜೆ.ಪಿ.ನಗರ, ಮೆಜೆಸ್ಟಿಕ್, ಸಿಟಿ ಮಾರುಕಟ್ಟೆ, ಹೆಬ್ಬಾಳ, ಎಚ್ ಎಎಲ್ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಇನ್ನೂ ಎರಡು ದಿನ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ ಆಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ.

ರಾಮನಗರ ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ತುಮಕೂರು ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ , ಶಿವಮೊಗ್ಗ ದಾವಣಗೆರೆ, ಚಿತ್ರದುರ್ಗ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಗಾಳಿ, ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದ್ದು, ಮಂಗಳವಾರದವರೆಗೆ ಯೆಲ್ಲೋ ಅಲರ್ಟ್‌’ಘೋಷಿಸಲಾಗಿದೆ ಎಂದು ವರದಿ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com