ಭ್ರಷ್ಟರ ಬೇಟೆ: ರಾಜ್ಯಾದ್ಯಂತ ಏಕಕಾಲಕ್ಕೆ 60 ಕಡೆಗಳಲ್ಲಿ ACB ದಾಳಿ

ರಾಜ್ಯದಲ್ಲಿ ನ.24 ರಂದು ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗಳ ಪಾಲಿಗೆ ಶುಭ ಮುಂಜಾನೆಯಾಗಿರಲಿಲ್ಲ. ಕಾರಣ 60 ಕಡೆಗಳಲ್ಲಿ ಏಕ ಕಾಲಕ್ಕೆ ಎಸಿಬಿ ದಾಳಿ ನಡೆದಿದೆ. 
ಎಸಿಬಿ
ಎಸಿಬಿ
Updated on

ಬೆಂಗಳೂರು: ರಾಜ್ಯದಲ್ಲಿ ನ.24 ರಂದು ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗಳ ಪಾಲಿಗೆ ಶುಭ ಮುಂಜಾನೆಯಾಗಿರಲಿಲ್ಲ. ಕಾರಣ 60 ಕಡೆಗಳಲ್ಲಿ ಏಕ ಕಾಲಕ್ಕೆ ಎಸಿಬಿ ದಾಳಿ ನಡೆದಿದೆ. 

ರಾಜ್ಯದ ಹಲವು ಜಿಲ್ಲೆಗಳಲ್ಲಿನ 15 ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆಯ ಆರೋಪ, ದೂರು ಬಂದ ಹಿನ್ನೆಲೆಯಲ್ಲಿ ಕೆಎಸ್ಎಸ್ ಅಧಿಕಾರಿ ನಾಗರಾಜ್ ಮನೆ, ಕಚೇರಿ ಮೇಲೆಯಲ್ಲೂ ಎಸಿಬಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. 

400 ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳಿಂದ ದಾಳಿ ನಡೆದಿದ್ದು ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಯುತ್ತಿದೆ. 

ಬೆಂಗಳೂರು, ಕಲಬುರಗಿ, ದಾವಣಗೆರೆ, ಬೆಳಗಾವಿಯ ಗೋಕಾಕ್, ಮಂಡ್ಯದಲ್ಲಿ ಎಸಿಬಿ ದಾಳಿ ನಡೆದಿದೆ. 

ಬೆಂಗಳೂರು ನಿರ್ಮಿತಿ ಕೇಂದ್ರದ ಮಾಜಿ ಪ್ರಾಜೆಕ್ಟ್ ಮ್ಯಾನೇಜರ್ ವಾಸುದೇವ್, ದೊಡ್ಡಬಳ್ಳಾಪುರದ ಕಂದಾಯ ನಿರೀಕ್ಷಕ ಲಕ್ಷ್ಮೀನರಸಿಂಹಯ್ಯ, ಮಂಗಳೂರು ಸ್ಮಾರ್ಟ್‌ ಸಿಟಿ ಇಇ ಕೆ.ಎಸ್.ಲಿಂಗೇಗೌಡ, ಮಂಡ್ಯ ಹೆಚ್‌ಎಲ್‌ಬಿಸಿ ಇಇ ಕೆ.ಶ್ರೀನಿವಾಸ್, 
ಬೆಂಗಳೂರು ನಂದಿನಿ ಡೇರಿಯ ಜನರಲ್ ಮ್ಯಾನೇಜರ್ ಬಿ.ಕೃಷ್ಣಾರೆಡ್ಡಿ, ಗದಗದ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ, ಸಹಕಾರಿ ಅಭಿವೃದ್ಧಿ ಅಧಿಕಾರಿ ಎ.ಕೆ.ಮಸ್ತಿ ನಿವಾಸದ ಮೇಲೆ ದಾಳಿ ನಡೆದಿದೆ. 

ಯಲಘಂಕದ ಸರ್ಕಾರಿ ಆಸ್ಪತ್ರೆಯ ಫಿಸಿಯೋಥೆರೆಪಿಸ್ಟ್ ರಾಜಶೇಖರ್, ಲೋಕೋಪಯೋಗಿ ಇಲಾಖೆಯ (PWD) ಜೆ.ಇ. ಶಾಂತಗೌಡ ಬಿರಾದಾರ್‌ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com