ರಾಜ್ಯದಲ್ಲಿಂದು ಕೊರೋನಾಗೆ ಮೂವರು ಸಾವು: 322 ಹೊಸ ಪ್ರಕರಣ ಪತ್ತೆ, 176 ಸೋಂಕಿತರು ಗುಣಮುಖ

 ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 322 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,95,285ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 322 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,95,285ಕ್ಕೆ ಏರಿಕೆಯಾಗಿದೆ.

176 ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 6,754 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸೋಂಕಿನಿಂದ ಇಂದು ಮೂವರು ಮೃತಪಟ್ಟಿದ್ದಾರೆ. ಇದರೊಂದಿಗೆ ಸೋಂಕಿನಿಂದ ಈವರೆಗೂ ಮೃತಪಟ್ಟವರ ಸಂಖ್ಯೆ 38,196 ಆಗಿದೆ. ಸೋಂಕಿನ ಪ್ರಮಾಣ ಶೇ 0.34 ರಷ್ಟಿದ್ದು, ಮರಣ ಪ್ರಮಾಣ ಶೇ. 0.93 ರಷ್ಜಿದೆ. 

ಬೆಂಗಳೂರಿನಲ್ಲಿ 149 ಹೊಸ ಪ್ರಕರಣ ಪತ್ತೆಯಾಗಿದ್ದು, 105 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಯಾವುದೇ ಸಾವು ಪ್ರಕರಣ ಸಂಭವಿಸಿಲ್ಲ. ಬಾಗಲಕೋಟೆ, ಬಳ್ಳಾರಿ, ದಾವಣಗೆರೆ, ಹಾವೇರಿ, ಕಲಬುರಗಿ, ರಾಯಚೂರು, ರಾಮನಗರ, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com