ಮುನಾವರ್ ಫಾರುಕಿ ಬೆಂಗಳೂರು ಕಾರ್ಯಕ್ರಮಕ್ಕೆ ರದ್ದುಗೊಳಿಸುವಂತೆ ಸಂಘಟಕರಿಗೆ ಪೊಲೀಸರ ಸೂಚನೆ

ಬೆಂಗಳೂರಿನಲ್ಲಿ ಇದೇ ನ. 28ರಂದು ಆಯೋಜನೆಗೊಂಡಿರುವ ಹಾಸ್ಯಗಾರ ಮುನಾವರ್ ಕಾರ್ಯಕ್ರಮಕ್ಕೆ ವಿರೋಧಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದುಗೊಳಿಸುವಂತೆ ಸಂಘಟಕರಿಗೆ ಪೊಲೀಸರು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಮುನಾವರ್ ಫಾರುಕಿ
ಮುನಾವರ್ ಫಾರುಕಿ

ಬೆಂಗಳೂರು: ಬೆಂಗಳೂರಿನಲ್ಲಿ ಇದೇ ನ. 28ರಂದು ಆಯೋಜನೆಗೊಂಡಿರುವ ಹಾಸ್ಯಗಾರ ಮುನಾವರ್ ಕಾರ್ಯಕ್ರಮಕ್ಕೆ ವಿರೋಧಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದುಗೊಳಿಸುವಂತೆ ಸಂಘಟಕರಿಗೆ ಪೊಲೀಸರು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡುವ ಮುನಾವರ್ ಫಾರುಕಿ ಇವರ ಬೆಂಗಳೂರು ಕಾರ್ಯಕ್ರಮ ರದ್ದುಗೊಳಿಸುವಂತೆ ಹಿಂದೂ ಜನಜಾಗೃತಿ ಸಮಿತಿ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದು, ಮುನಾವರ್ ಕಾರ್ಯಕ್ರಮಕ್ಕೆ ಹಿಂದೂಪರ ಸಂಘಟನೆಗಳ ವಿರೋಧ ವ್ಯಕ್ತಪಡಿಸಿದೆ.

ನಿರಂತರವಾಗಿ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡುವ ಗುಜರಾತ ಮೂಲದ ಹಾಸ್ಯಗಾರ ಮುನಾವರ್ ಫಾರುಕಿಯ ಡೊಂಗ್ರಿ ಟು ನೋವೇರ್ ಹೆಸರಿನಲ್ಲಿ ಬೆಂಗಳೂರಿನಲ್ಲಿ ನ. 28ರ ಸಂಜೆ ಗುಡ್ ಶೇಪೆರ‍್ಡ್ ಆಡಿಟೋರಿಯಮ್‌ನಲ್ಲಿ ಕಾರ್ಯಕ್ರಮ ನಿಯೋಜನೆಯಾಗಿದೆ. ಈ ಕಾರ್ಯಕ್ರಮಕ್ಕೆ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿವೆ.

ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜಕರಿಗೆ ಪತ್ರ ಬರೆದಿರುವ ನಗರ ಪೊಲೀಸರು ಕಾರ್ಯಕ್ರಮವನ್ನು ರದ್ದು ಮಾಡುವಂತೆ ಸೂಚನೆ ನೀಡಿದೆ.

“ಮುನಾವರ್ ಫರುಕಿ ಅವರು ಇತರ ಧರ್ಮ ಮತ್ತು ದೇವರುಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ವ್ಯಕ್ತಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಅನೇಕ ರಾಜ್ಯಗಳು ಅವರ ಹಾಸ್ಯ ಕಾರ್ಯಕ್ರಮಗಳನ್ನು ನಿಷೇಧಿಸಿವೆ. ಇವರ ವಿರುದ್ಧ ಮಧ್ಯಪ್ರದೇಶದ ಇಂದೋರ್‌ನ ತುಕೋಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ (ಮುಖ್ಯವಾಗಿ ಐಪಿಸಿ 295ಎ ಅಡಿಯಲ್ಲಿ- ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ).

ಈತನ ವಿರುದ್ಧ ಹಲವು ರಾಜ್ಯಗಳಲ್ಲಿ ಇದೇ ರೀತಿಯ ಪ್ರಕರಣಗಳು ದಾಖಲಾಗಿವೆ. ಫರುಕಿ ಪ್ರದರ್ಶಿಸಿದ ಈ ಸ್ಟ್ಯಾಂಡ್-ಅಪ್ ಕಾಮಿಡಿ ಶೋಗೆ ಹಲವಾರು ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿವೆ ಎಂಬ ಬಗ್ಗೆ ಮಾಹಿತಿ ಇದೆ. ಇದು ಗಲಭೆಯನ್ನು ಸೃಷ್ಟಿಸಬಹುದು ಮತ್ತು ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರಬಹುದು ಮತ್ತು ಇದು ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳಿಗೆ ಕಾರಣವಾಗಬಹುದು. ಹೀಗಾಗಿ ಫಾರೂಕಿ ಅವರ ಹಾಸ್ಯ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಸೂಚಿಸಿರುವುದು ಪತ್ರದಲ್ಲಿ ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com