ಬೆಂಗಳೂರು: ಕೆಎಸ್ ಆರ್ ಟಿಸಿ ಬಸ್ ಹರಿದು ದ್ವಿಚಕ್ರ ವಾಹನ ಸವಾರ ಸಾವು

ಕೆಎಸ್ ಆರ್ ಟಿಸಿ ಬಸ್ ಹರಿದು ದ್ವಿಚಕ್ರ ವಾಹನ ಸವಾರನೊಬ್ಬ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿ ಸರ್ಕಲ್ ಬಳಿ ನಡೆದಿದೆ. 
ಕೆಎಸ್ ಆರ್ ಟಿಸಿ ಬಸ್  ಮತ್ತು ಅಪಘಾತಕ್ಕೀಡಾದ ಸ್ಕೂಟರ್
ಕೆಎಸ್ ಆರ್ ಟಿಸಿ ಬಸ್ ಮತ್ತು ಅಪಘಾತಕ್ಕೀಡಾದ ಸ್ಕೂಟರ್

ಬೆಂಗಳೂರು: ಕೆಎಸ್ ಆರ್ ಟಿಸಿ ಬಸ್ ಹರಿದು ದ್ವಿಚಕ್ರ ವಾಹನ ಸವಾರನೊಬ್ಬ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿ ಸರ್ಕಲ್ ಬಳಿ ನಡೆದಿದೆ. 

ಕಾವೇರಿ ಭವನದಿಂದ ದೊಡ್ಡಬಳ್ಳಾಪುರಕ್ಕೆ ಹೋಗುತ್ತಿದ್ದ ಕೆಎ-40 ಎಫ್-0994 ನಂಬರ್ ನ ಬಸ್ ದ್ವಿಚಕ್ರ ವಾಹನ ಸವಾರನ ಮೇಲೆ ಹರಿದ ಪರಿಣಾಮ ಸ್ಥಳದಲ್ಲಿಯೇ ಸವಾರ ಸಾವಿಗೀಡಾಗಿದ್ದಾನೆ.

ಅಪಘಾತವಾಗುತ್ತಿದ್ದಂತೆ ಕೆಎಸ್​ಆರ್​ಟಿಸಿ ಬಸ್​ ಚಾಲಕ ಹಾಗೂ ಕಂಡಕ್ಟರ್ ಪರಾರಿಯಾಗಿದ್ದಾರೆ. ಮೃತ ಸವಾರನ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಹೆಬ್ಬಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com