social_icon

ಬೆಂಗಳೂರು: ಲಸಿಕೆ ನೀಡುವ ನೆಪದಲ್ಲಿ ಮನೆಗೆ ನುಗ್ಗಿ, ಗನ್ ನಿಂದ ಬೆದರಿಸಿ ದರೋಡೆ

ಕೊರೋನಾ ವೈರಸ್ ಗೆ ಲಸಿಕೆ ನೀಡುವ ಆರೋಗ್ಯ ಕಾರ್ಯಕರ್ತರ ಸೋಗಿನಲ್ಲಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ದರೋಡೆ ಮಾಡಿರುವ ಘಟನೆ ಯಶವಂತಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Published: 30th November 2021 06:54 PM  |   Last Updated: 30th November 2021 06:54 PM   |  A+A-


robs women at gunpoint

ದರೋಡೆ (ಸಾಂದರ್ಭಿಕ ಚಿತ್ರ)

Posted By : srinivasamurthy
Source : The New Indian Express

ಬೆಂಗಳೂರು: ಕೊರೋನಾ ವೈರಸ್ ಗೆ ಲಸಿಕೆ ನೀಡುವ ಆರೋಗ್ಯ ಕಾರ್ಯಕರ್ತರ ಸೋಗಿನಲ್ಲಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ದರೋಡೆ ಮಾಡಿರುವ ಘಟನೆ ಯಶವಂತಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಯಶವಂತಪುರದ ಎಸ್‌ಬಿಎಂ ಕಾಲೋನಿಯ ಬೃಂದಾವನ ನಗರದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯ ನಿವಾಸಿ ಸಂಪತ್‌ ಸಿಂಗ್‌ ಎಂಬುವವರ ಮನೆಯಲ್ಲಿ ದುಷ್ಕರ್ಮಿಗಳು ದರೋಡೆ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಕಾಲೇಜ್ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಕೊರೋನಾ ಲಸಿಕೆ (Covid vaccine) ಹಾಕುವ ವೈದ್ಯ ಸಿಬ್ಬಂದಿ ಸೋಗಿನಲ್ಲಿ ಮನೆ ಪ್ರವೇಶಿಸಿದ ದುಷ್ಕರ್ಮಿಗಳು, ಬಳಿಕ ಮನೆಯ ಸದಸ್ಯರಿಗೆ ಪಿಸ್ತೂಲ್‌ ತೋರಿಸಿ 50 ಗ್ರಾಂ ತೂಕದ ಚಿನ್ನದ ಸರ ದೋಚಿ ಪರಾರಿಯಾಗಿದ್ದಾರೆ. ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಯಶವಂತಪುರದ ಎಸ್‌ಬಿಎಂ ಕಾಲೋನಿಯ ನಿವಾಸಿ ಸಂಪತ್‌ ಸಿಂಗ್‌ ಅವರ ನಿವಾಸಕ್ಕೆ ದರೋಡೆಕೋರರು ನುಗ್ಗಿದ್ದು ಈ ವೇಳೆ ಸಂಪತ್‌ ಸಿಂಗ್‌ ಪತ್ನಿ ಪಿಸ್ತಾ ದೇವಿ ಮತ್ತು ಸೊಸೆ     ರಕ್ಷಾ ಇಬ್ಬರು ಮಾತ್ರ ಮನೆಯಲ್ಲಿದ್ದರು.  ಕಾರು ಹಾಗೂ ದ್ವಿಚಕ್ರ ವಾಹನದಲ್ಲಿ ಬಂದಿದ್ದ ನಾಲ್ವರು ದುಷ್ಕರ್ಮಿಗಳು, ತಾವು ಕೊರೋನಾ ಲಸಿಕೆ ನೀಡಲು ಬಂದಿದ್ದೇವೆ. ನೀವು 2ನೇ ಡೋಸ್ ಲಸಿಕೆ ಪಡೆದಿದ್ದೀರಾ ಎಂದು ವಿಚಾರಿಸುತ್ತಲೇ ಮನೆ ಪ್ರವೇಶಿಸಿದ್ದಾರೆ. ಬಳಿಕ ಏಕಾಏಕಿ ಪಿಸ್ತೂಲ್‌ ತೆಗೆದು ಇಬ್ಬರು ಮಹಿಳೆಯರನ್ನು ಹೆದರಿಸಿ, ಬೀರುವಿನಲ್ಲಿರಿಸಿದ್ದ 50 ಗ್ರಾಂ ತೂಕದ ಚಿನ್ನದ ಸರ ದೋಚಿ ಪರಾರಿಯಾಗಿದ್ದಾರೆ.

ಇದನ್ನೂ ಓದಿ: ವಯಸ್ಸಿಗೆ ಬಾರದ ಹುಡುಗಿಗೆ ಓದು ಬಿಟ್ಟು ಮದುವೆ ಮಾಡಿಕೊಳ್ಳುವಂತೆ ಪೋಷಕರ ಒತ್ತಾಯ: ಹೈಕೋರ್ಟ್ ನಿಂದ ರಕ್ಷಣೆ

ದರೋಡೆ ವೇಳೆ ಮನೆಗೆ ಬಂದಿದ್ದ ಪುತ್ರ
ಇನ್ನು ದರೋಡೆ ನಡೆಯುತ್ತಿದ್ದ ವೇಳೆ ಸಂಪತ್ ಸಿಂಗ್ ಅವರ ಪುತ್ರ ವಿಕ್ರಮ್ ಸಿಂಗ್ ಮನೆಗೆ ಬಂದಿದ್ದ. ಆದರೆ ಈ ವೇಳೆ ಮನೆ ಬಾಗಿಲು ಲಾಕ್ ಆಗಿತ್ತು. ಮಕ್ಕಳಿಗೆ ಊಟದ ಡಬ್ಬಿ ಕೊಡುವಂತೆ ಜೋರಾಗಿ ಕೂಗಿದ. ಅಷ್ಟು ಹೊತ್ತಿಗಾಗಲೇ ದುಷ್ಕರ್ಮಿಗಳು ಇಬ್ಬರೂ ಮಹಿಳೆಯರನ್ನೂ ರೂಮಿನಲ್ಲಿ ಕೂಡಿ ಹಾಕಿದ್ದರು. ಬಳಿಕ ಮನೆಗೆ ಬಂದ ಅತಿಥಿಗಳಂತೆ ನಟಿಸಿ ಮನೆಯಿಂದ ಹೊರಗೆ ಬಂದು ದೂರದಲ್ಲಿ ನಿಲ್ಲಿಸಿದ್ದ ಕಾರು ಹಾಗೂ ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದಾರೆ. 

ಇದನ್ನೂ ಓದಿ: ಬೆಳ್ಳಂಬೆಳಗ್ಗೆ‌ ಪರಪ್ಪನ ಅಗ್ರಹಾರದ ಜೈಲಿನ ಮೇಲೆ ಸಿಸಿಬಿ ದಾಳಿ; ಮೊಬೈಲ್, ಗಾಂಜಾ ಪತ್ತೆ!

ಬಂದಿದ್ದವರು ಯಾರೆಂದು ಪರಿಶೀಲಿಸಲು ಮಗ ವಿಕ್ರಮ್ ಸಿಂಗ್ ಮನೆಯೊಳಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಘಟನೆ ಸಂಬಂಧ ಸಂಪತ್‌ ಸಿಂಗ್‌ ಅವರು ದೂರು ನೀಡಿದ ದೂರಿನ ಮೇರೆಗೆ ದುಷ್ಕರ್ಮಿಗಳ ಪತ್ತೆಗೆ ಮುಂದಾಗಿರುವ ಪೊಲೀಸರು, ಘಟನಾ ಸ್ಥಳದ ಸಮೀಪದ ಸಿಸಿಟಿವಿ ದೃಶ್ಯಾವಳಿ ಸಂಗ್ರಹಿಸಿ ಪರಿಶೀಲಿಸಿದ್ದಾರೆ. ಆರೋಪಿಗಳ ಸುಳಿವು ಸಿಕ್ಕಿದ್ದು ಶೀಘ್ರದಲ್ಲೇ ಬಂಧಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಯಶವಂತಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
 


Stay up to date on all the latest ರಾಜ್ಯ news
Poll
N R narayana Murty

ಯಾವುದನ್ನೂ ಫ್ರೀಯಾಗಿ ಕೊಡಬಾರದು ಎಂದು ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp