ಮಳೆಯಿಂದ ಉರುಳಿದ್ದ ಮರಕ್ಕೆ ಡಿಕ್ಕಿ ಹೊಡೆದು ಹೋಟೆಲ್ ಮಾಲೀಕ ಸಾವು!

ಶನಿವಾರ ರಾತ್ರಿ ಬೆಂಗಳೂರಿನಲ್ಲಿ ಸುರಿದ ಮಳೆಯ ಪರಿಣಾಮ ಉರುಳಿದ್ದ ಮರಕ್ಕೆ ಡಿಕ್ಕಿ ಹೊಡೆದು ಹೋಟೆಲ್ ಮಾಲಿಕ ಸಾವನ್ನಪ್ಪಿರುವ ಘಟನೆ ಸೋಮವಾರ ಬೆಳಿಗ್ಗೆ 4.30ಕ್ಕೆ ನಡೆದಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಶನಿವಾರ ರಾತ್ರಿ ಬೆಂಗಳೂರಿನಲ್ಲಿ ಸುರಿದ ಮಳೆಯ ಪರಿಣಾಮ ಉರುಳಿದ್ದ ಮರಕ್ಕೆ ಡಿಕ್ಕಿ ಹೊಡೆದು ಹೋಟೆಲ್ ಮಾಲಿಕ ಸಾವನ್ನಪ್ಪಿರುವ ಘಟನೆ ಸೋಮವಾರ ಬೆಳಿಗ್ಗೆ 4.30ಕ್ಕೆ ನಡೆದಿದೆ. 

ಬಿಎಸ್ ನಾಗರಾಜ್ ಧನ್ಯ ಮೃತ ದುರ್ದೈವಿಯಾಗಿದ್ದು, ತಮ್ಮ ಹೊಟೇಲ್ ವಾದಿರಾಜ್ ಗೆ ತೆರಳುತ್ತಿದ್ದಾಗ ಈ ಘಟನೆ ವರದಿಯಾಗಿದೆ. ಕತ್ತಲಿದ್ದರಿಂದ ಧರೆಗುರುಳಿದ್ದ ಮರ ವಾಹನ ಸವಾರನಿಗೆ ಕಾಣಲಿಲ್ಲ. ಆದ್ದರಿಂದ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಜಯನಗರದ ಅಪೋಲೋ ಆಸ್ಪತ್ರೆಗೆ ಸೇರಿಸುವ ವೇಳೆಗೆ ಆತ ಮೃತಪಟ್ಟಿದ್ದಾರೆ. ಹೊಟೆಲ್ ಅಸೋಸಿಯೇಷನ್ ನ ಮಾಲಿಕರಾದ ಪಿಸಿರಾವ್ ಈ ಅಪಘಾತದ ಘಟನೆಯನ್ನು ದೃಢಪಡಿಸಿದ್ದಾರೆ. 

ಬಿಎಸ್ ನಾಗರಾಜ್ ಧನ್ಯ ಅವರ ತಲೆಗೆ ತೀವ್ರವಾದ ಗಾಯಗಳಾಗಿದ್ದರಿಂದ ಮೃತಪಟ್ಟಿದ್ದಾರೆ. ಬಿಎಸ್ ನಾಗರಾಜ್ ಬೆಂಗಳೂರು ಹೊಟೇಲ್ ಅಸೋಸಿಯೇಷನ್ ಹಾಗೂ ಕರ್ನಾಟಕ ಹೊಟೇಲ್ ಅಸೋಸಿಯೇಷನ್ ನ ಮಾಜಿ ಕಾರ್ಯದರ್ಶಿಯಾಗಿದ್ದರು." ಬಿಬಿಎಂಪಿ ನೀಡಿರುವ ಮಾಹಿತಿಯ ಪ್ರಕಾರ ಕಂಟ್ರೋಲ್ ರೂಮ್ ಮಳೆಯಿಂದಾಗಿ ಮರಗಳು ಧರೆಗುರುಳಿರುವ 7 ಘಟನೆಗಳು ವರದಿಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com