ಬೆಂಗಳೂರು: ಇನ್ಸ್ಟಾಗ್ರಾಮ್ನಲ್ಲಿ ಯುವತಿಗೆ ಮೆಸೇಜ್ ಮಾಡಿದ್ದಕ್ಕೆ ಆಟೋ ಚಾಲಕನ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿಯಲ್ಲಿ ಈ ಘಟನೆ ನಡೆದಿತ್ತು. ಪ್ರಜ್ವಲ್ ಅಲಿಯಾಸ್ ಕಪ್ಪೆ, ಕಿರಣ ಅಲಿಯಾಸ್ ವಾಲೆ, ಮನೋಜ್, ಮೂರ್ತಿ, ಸಂದೀಪ ಬಂಧಿತ ಆರೋಪಿಗಳು.
ಇನ್ಸ್ಟಾಗ್ರಾಮ್ನಲ್ಲಿ ಆಟೋ ಚಾಲಕ ನವೀನ್ ಎಂಬಾತ ಯುವತಿಗೆ ಮೆಸೇಜ್ ಮಾಡಿದ್ದ, ಇದೇ ವಿಚಾರಕ್ಕೆ ಯುವತಿ ಪ್ರಿಯಕರ ಪ್ರಜ್ವಲ್ ಮತ್ತು ತಂಡ, ರಾಜಿ ಮಾಡಿಕೊಳ್ಳುವ ಎಂದು ಕರೆದು, ನವೀನ್ ಹಾಗೂ ಸ್ನೇಹಿತ ಹರೀಶ್ ತಲೆ ಮತ್ತು ಹೊಟ್ಟೆ ಭಾಗಕ್ಕೆ ಮಚ್ಚಿನಿಂದ ಕೊಚ್ಚಿ ಪರಾರಿಯಾಗಿದ್ದರು.
ಘಟನೆಗೆ ಸಂಬಂಧಿಸಿದಂತೆ ಸೆ. 24 ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಯುವರಾಜ ಅಲಿಯಾಸ್ ನಾಯಿ, ದರ್ಶನ್, ಕುಮಾರ್ ತಲೆಮರೆಸಿಕೊಂಡಿದ್ದು, ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ.
Advertisement