ಬೆಂಗಳುರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಕಲ್ಲಿದ್ದಲು, ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ನವದೆಹಲಿಯಲ್ಲಿ ಅ.09 ರಂದು ಭೇಟಿ ಮಾಡಿ ಚರ್ಚಿಸಿದರು.
ರಾಜ್ಯಕ್ಕೆ ಮಂಜೂರಾಗಿರುವ ಯೋಜನೆಗಳು, ಪ್ರಸ್ತಾವಿತ ಯೋಜನೆಗಳ ಅನುಷ್ಠಾನ ಕುರಿತಂತೆ ಮಾತುಕತೆ ನಡೆದಿದ್ದು ಈ ದಿಶೆಯಲ್ಲಿ ಕೇಂದ್ರದಿಂದ ಮತ್ತಷ್ಟೂ ಸಹಕಾರವನ್ನು ಮುಖ್ಯಮಂತ್ರಿ ಕೋರಿದರು. ಇವರ ಪ್ರಸ್ತಾವನೆಗಳ ಜಾರಿಗೆ ಸೂಕ್ತವಾಗಿ ಸ್ಪಂದಿಸುವುದಾಗಿ ಕೇಂದ್ರ ಕಲ್ಲಿದ್ದಲು, ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವರು ಹೇಳಿದರು ಎನ್ನಲಾಗಿದೆ.
ಇದೇ ವೇಳೆ ಸಿಎಂ ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನೂ ಭೇಟಿ ಮಾಡಿ ಚರ್ಚಿಸಿದರು.
ರಾಜ್ಯಕ್ಕೆ ಮಂಜೂರಾಗಿರುವ ಯೋಜನೆಗಳು, ಪ್ರಸ್ತಾವಿತ ಯೋಜನೆಗಳ ಅನುಷ್ಠಾನ ಕುರಿತಂತೆ ಮಾತುಕತೆ ನಡೆದಿದ್ದು ಈ ದಿಶೆಯಲ್ಲಿ ಕೇಂದ್ರದಿಂದ ಮತ್ತಷ್ಟೂ ಸಹಕಾರವನ್ನು ಮುಖ್ಯಮಂತ್ರಿ ಕೋರಿದರು. ಇವರ ಪ್ರಸ್ತಾವನೆಗಳ ಜಾರಿಗೆ ಸೂಕ್ತವಾಗಿ ಸ್ಪಂದಿಸುವುದಾಗಿ ಕೇಂದ್ರ ವಿಮಾನಯಾನ ಖಾತೆ ಸಚಿವರು ಹೇಳಿದರು ಎನ್ನಲಾಗಿದೆ.
ಈ ಸಂದರ್ಭದಲ್ಲಿ ಕೇಂದ್ರ ಕಲ್ಲಿದ್ದಲು,ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ವಿ.ಸುನೀಲ್ ಕುಮಾರ, ಸರಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಹಾಜರಿದ್ದರು.
Advertisement