ರಾಜ್ಯದಲ್ಲಿ ಮತಾಂತರ ನಿಷೇಧಕ್ಕೆ ಶೀಘ್ರದಲ್ಲೇ ಕಠಿಣ ಕಾನೂನು ಜಾರಿಗೆ ತರಲಾಗುತ್ತದೆ: ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಮತಾಂತರ ನಿಷೇಧ ಮಾಡಲು ಕಠಿಣ ಕಾನೂನನ್ನು ಶೀಘ್ರದಲ್ಲೇ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Updated on

ಉಡುಪಿ: ರಾಜ್ಯದಲ್ಲಿ ಮತಾಂತರ ನಿಷೇಧ ಮಾಡಲು ಕಠಿಣ ಕಾನೂನನ್ನು ಶೀಘ್ರದಲ್ಲೇ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ. 

ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ನೂತನ ವಿಜ್ಞಾನ ಸಮುಚ್ಚಯ ಮತ್ತು ಪೂರ್ಣ ಪ್ರಜ್ಞ ಪದವಿಪೂರ್ವ ಕಾಲೇಜಿನಲ್ಲಿ ಗಣಕ ವಿಜ್ಞಾನ ಪ್ರಯೋಗಾಲಯದ ಉದ್ಘಾಟನೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ಹೆಚ್ಚುತ್ತಿರುವ ಮತಾಂತರವನ್ನು ನಿಷೇಧಿಸುವ ಕಾಯ್ದೆ ಜಾರಿಗೆ ತರುತ್ತೇವೆ. ಅದಕ್ಕಾಗಿ ಬೇರೆ ಬೇರೆ ರಾಜ್ಯಗಳಲ್ಲಿ ಈಗಾಗಲೇ ಜಾರಿಯಲ್ಲಿರುವ ಮತಾಂತರ ನಿಷೇಧ ಕಾಯ್ದೆಗಳನ್ನು ಅಧ್ಯಯನ ಮಾಡುತ್ತಿದ್ದು, ಶೀಘ್ರದಲ್ಲೇ ನಮ್ಮ ರಾಜ್ಯದಲ್ಲಿ ಸೂಕ್ತ ಕಾಯ್ದೆ ಜಾರಿಗೆ ತರಲಾಗುತ್ತದೆ ಎಂದು ಹೇಳಿದ್ದಾರೆ. 

ಕರಾವಳಿಯಲ್ಲಿ ಗೋಹತ್ಯೆ ಘಟನೆಗಳು ಹೆಚ್ಚುತ್ತಿದ್ದು, ರಾಜ್ಯದಲ್ಲಿ ಈಗಾಗಲೇ ಗೋಹತ್ಯೆ ನಿಷೇಧ ಕಾಯ್ದೆ ಇದೆ. ಅದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com