social_icon

ಒಳ್ಳೆ ಸುದ್ದಿ: ಎಲ್ಲಾ ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.1 ಕ್ಕಿಂತ ಕಡಿಮೆ!

ರಾಜ್ಯದಲ್ಲಿನ ಎಲ್ಲಾ ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ. 1ಕ್ಕಿಂತಲೂ ಕಡಿಮೆಯಿದೆ.  ಆದಾಗ್ಯೂ, ನವೆಂಬರ್ ವರೆಗೂ ಸರ್ಕಾರ  ಸೋಂಕಿನ ಪರೀಕ್ಷೆ ನಡೆಸುವಂತೆ ತಜ್ಞರು ಸಲಹೆ ನೀಡಿದ್ದಾರೆ.

Published: 16th October 2021 05:33 PM  |   Last Updated: 16th October 2021 05:37 PM   |  A+A-


A_health_worker_collects_swab_samples_from_a_passenger1

ಆರೋಗ್ಯ ಕಾರ್ಯಕರ್ತರೊಬ್ಬರು ಬೆಂಗಳೂರಿನ ಕ್ರಾಂತಿವೀರ ರೈಲು ನಿಲ್ದಾಣದ ಬಳಿ ಸ್ವಾಬ್ ಸಂಗ್ರಹಿಸುತ್ತಿರುವ ಚಿತ್ರ

Posted By : nagaraja
Source : The New Indian Express

ಬೆಂಗಳೂರು: ರಾಜ್ಯದಲ್ಲಿನ ಎಲ್ಲಾ ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ. 1ಕ್ಕಿಂತಲೂ ಕಡಿಮೆಯಿದೆ.  ಆದಾಗ್ಯೂ, ನವೆಂಬರ್ ವರೆಗೂ ಸರ್ಕಾರ  ಸೋಂಕಿನ ಪರೀಕ್ಷೆ ನಡೆಸುವಂತೆ ತಜ್ಞರು ಸಲಹೆ ನೀಡಿದ್ದಾರೆ.

ವಾರ್ ರೂಮ್ ಮಾಹಿತಿ ಪ್ರಕಾರ, ಕಳೆದ ಏಳು ದಿನಗಳಲ್ಲಿ 20 ಜಿಲ್ಲೆಗಳಲ್ಲಿನ ಪಾಸಿಟಿವಿಟಿ ದರ ರಾಜ್ಯದ ಸರಾಸರಿಗಿಂತ ಕಡಿಮೆಯಿದ್ದು,  ಒಟ್ಟಾರೇ ರಾಜ್ಯದಲ್ಲಿನ ಕೋವಿಡ್ ಪಾಸಿಟಿವಿಟಿ ದರ ಶೇ. 0.31 ರಷ್ಟಿದೆ. ಅಕ್ಟೋಬರ್ ಆರಂಭದಲ್ಲಿ  ಚಿಕ್ಕಮಗಳೂರಿನಲ್ಲಿ ಶೇ. 1.69, ಕೊಡಗಿನಲ್ಲಿ ಶೇ 1.56, ಉಡುಪಿ ಶೇ. 1.19 ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ, 1. 05 ರಷ್ಟು ಕೋವಿಡ್ ಪಾಸಿಟಿವಿಟಿ ದರ ಕಂಡುಬಂದಿದೆ. 

ಅಕ್ಟೋಬರ್ 12 ರಂದು ಎರಡು ಜಿಲ್ಲೆಗಳಲ್ಲಿ ಮಾತ್ರ ಪಾಸಿಟಿವಿಟಿ ರೇಟ್ ಶೇ. 1ಕ್ಕಿಂತ ಹೆಚ್ಚಾಗಿತ್ತು. ಮೈಸೂರಿನಲ್ಲಿ ಶೇ. 1. 04 ಮತ್ತು ಹಾಸನದಲ್ಲಿ ಶೇ. 1. 03 ರಷ್ಟಿತ್ತು. ಆದರೆ, ಅಕ್ಟೋಬರ್ 14 ರಂದು ಈ ಎರಡು ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಶೇ. 1ಕ್ಕಿಂತ ಕಡಿಮೆಯಿತ್ತು. ಮೈಸೂರಿನಲ್ಲಿ ಶೇ. 0.82  ಮತ್ತು ಹಾಸನದಲ್ಲಿ ಶೇ. 0.77 ರಷ್ಟು ವರದಿಯಾಗಿತ್ತು. ಚಿಕ್ಕಮಗಳೂರಿನಲ್ಲಿ ಶೇ. 0.49, ಉಡುಪಿ ಶೇ. 0.44 ಸೇರಿದಂತೆ ಇತರ ಎಲ್ಲಾ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಶೇಕಡಾ 1ಕ್ಕಿಂತಲೂ ಕಡಿಮೆ ದಾಖಲಾಗಿತ್ತು. ಕಲಬುರಗಿ ಮತ್ತು ಯಾದಗಿರಿಯಲ್ಲಿ  ಪಾಸಿಟಿವಿಟಿ ದರ ಶೂನ್ಯವಾಗಿದ್ದರೆ ಬಾಗಲಕೋಟೆ ಮತ್ತು ಹಾವೇರಿ ಶೇ. 0.02 ರಷ್ಟಿತ್ತು.

ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಕಡಿಮೆಯಾಗಿದ್ದು, ಪರಿಸ್ಥಿತಿ ಸುಧಾರಿಸಿದ್ದರೂ, ನವೆಂಬರ್ ಕೊನೆಯವರೆಗೂ ಪರೀಕ್ಷೆ ನಡೆಸುವುದನ್ನು ಮುಂದುವರೆಸಬೇಕೆಂದು ತಾಂತ್ರಿಕ ಸಲಹಾ ಸಮಿತಿ ಸದಸ್ಯ ಡಾ. ಎಂ. ಕೆ ಸುದರ್ಶನ್ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಆಕ್ಟೋಬರ್ ಮತ್ತು ನವೆಂಬರ್ ನಲ್ಲಿ  ಇಡೀ ರಾಜ್ಯದಲ್ಲಿ 1, 10,000 ಪರೀಕ್ಷೆ ನಡೆಸಬೇಕಾಗುತ್ತದೆ. ಇದರಲ್ಲಿ ಬೆಂಗಳೂರು ಒಂದರಲ್ಲಿಯೇ  50 ಸಾವಿರ ಟೆಸ್ಟಿಂಗ್ ಮಾಡಬೇಕಾಗಿದೆ. ಮಾಸ್ಕ್ ಧರಿಸುವುದು, ಲಸಿಕೆ ಹಾಗೂ ಟೆಸ್ಟಿಂಗ್ ಪ್ರಮುಖ ಸಂಗತಿಗಳಾಗಿವೆ ಎಂದು ಅವರು ತಿಳಿಸಿದ್ದಾರೆ. 

ಕೋವಿಡ್ ಸೋಂಕಿನ ಪ್ರಮಾಣ ರಾಜ್ಯದಲ್ಲಿ ಕಡಿಮೆಯಾಗಿದ್ದರೂ ನಿರ್ಲಕ್ಷ್ಯ ಸಲ್ಲದು, ಇದೀಗ ಕುಟುಂಬ ಕ್ಲಸ್ಟರ್ ನಲ್ಲಿ ಸೋಂಕು ಕಂಡುಬರುತ್ತಿದ್ದು, ಸಮುದಾಯ ಕ್ಲಸ್ಟರ್ ನಲ್ಲಿ ಕಂಡುಬರುತ್ತಿಲ್ಲ. ಲಸಿಕೆ ನೀಡುವಿಕೆ, ರೋಗ ನಿರೋಧಕ ಶಕ್ತಿ ವೃದ್ಧಿಯಿಂದ ಪಾಸಿಟಿವಿಟಿ ಕಡಿಮೆಯಾಗಿರಬಹುದು, ಅಕ್ಟೋಬರ್- ನವೆಂಬರ್ ನಲ್ಲಿ ಮೂರನೇ ಅಲೆ ಬರಬಹುದೆಂಬ ಊಹಿಸಿತಾದರೂ, ಸಮಯ ಮೀರುತ್ತಿದೆ ಎಂದು ಜಯದೇವ ಹೃದ್ರೋಗ  ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್ ಹೇಳಿದ್ದಾರೆ. 


Stay up to date on all the latest ರಾಜ್ಯ news
Poll

ಸಿದ್ದರಾಮಯ್ಯ ಸರ್ಕಾರದಿಂದ ಐದು ಗ್ಯಾರಂಟಿಗಳ ಜಾರಿ: ಇತರ ರಾಜ್ಯಗಳ ವಿಧಾನಸಭೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗುವುದೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp