ಮಂಗಳೂರು: ದಸರಾ ಪಾರ್ಟಿಯಲ್ಲಿ ಗಲಾಟೆ; ಯುವಕನ ಹತ್ಯೆ

ದಸರಾ ಹಬ್ಬದ ಪ್ರಯುಕ್ತ ಗೆಳೆಯರೆಲ್ಲಾ ಸೇರಿಕೊಂಡು ಪಾರ್ಟಿ ಮಾಡುತ್ತಿದ್ದ ವೇಳೆ ಗಲಾಟೆ ನಡೆದಿದ್ದು, ಓರ್ವನ ಕೊಲೆಯಲ್ಲಿ ಅಂತ್ಯಗೊಂಡಿದೆ. ಧನುಷ್ ಕೊಲೆಯಾದ ಯುವಕ. ಮಂಗಳೂರಿನ ಪಂಪ್​ವೆಲ್ ಬಳಿಯ ಹೋಟೆಲ್ ಒಂದರಲ್ಲಿ ಶುಕ್ರವಾರ ತಡರಾತ್ರಿ ಈ ದುರ್ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಗೆಳೆಯರೆಲ್ಲಾ ಸೇರಿಕೊಂಡು ಪಾರ್ಟಿ ಮಾಡುತ್ತಿದ್ದ ವೇಳೆ ಗಲಾಟೆ ನಡೆದಿದ್ದು, ಓರ್ವನ ಕೊಲೆಯಲ್ಲಿ ಅಂತ್ಯಗೊಂಡಿದೆ. ಧನುಷ್ ಕೊಲೆಯಾದ ಯುವಕ. ಮಂಗಳೂರಿನ ಪಂಪ್​ವೆಲ್ ಬಳಿಯ ಹೋಟೆಲ್ ಒಂದರಲ್ಲಿ ಶುಕ್ರವಾರ ತಡರಾತ್ರಿ ಈ ದುರ್ಘಟನೆ ನಡೆದಿದೆ.

ಅ.15 ರಂದು ಪ್ರಮೀತ್, ಜೇಸನ್, ಕಾರ್ತೀಕ್, ಧನುಷ್, ದುರ್ಗೇಶ್ ಮತ್ತು ಪ್ರಜ್ವಲ್ ಸೇರಿ ಒಟ್ಟು ಆರು ಜನ ಗೆಳೆಯರು ಜೊತೆಗೂಡಿ ಲಾಡ್ಜ್​ನಲ್ಲಿ ಪಾರ್ಟಿ ಮಾಡುತ್ತಿದ್ದರು.ರಾತ್ರಿ 2 ಗಂಟೆ ಸುಮಾರಿಗೆ ಜೇಸನ್ ಸುರತ್ಕಲ್ ಮತ್ತು ಧನುಷ್ ಪಚ್ಚನಾಡಿ ಎಂಬುವರ ಮಧ್ಯೆ ಜಗಳ ಆರಂಭವಾಗಿದೆ.

ಗಲಾಟೆ ತಾರಕ್ಕೇರಿದ ಪರಿಣಾಮ ಈ ವೇಳೆ ಜೇಸನ್ ಹರಿತವಾದ ಆಯುಧದಿಂದ ಧನುಷ್​ಗೆ ಇರಿದಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಧನುಷ್​ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸದ್ಯ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com