ಕೊನೆಗೂ ಜೈಲಿನಿಂದ ಬಿಡುಗಡೆಯಾದ ಮಾಜಿ ಸಿಎಂ ದಿವಂಗತ ಜಯಲಲಿತಾ ದತ್ತುಪುತ್ರ ಸುಧಾಕರನ್!

4 ರ್ಷಗಳ ಬಳಿಕ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರ ದತ್ತುಪುತ್ರ ಸುಧಾಕರನ್ ಅವರು ಶನಿವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. 
ಸುಧಾಕರನ್
ಸುಧಾಕರನ್

ಬೆಂಗಳೂರು: 4 ರ್ಷಗಳ ಬಳಿಕ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರ ದತ್ತುಪುತ್ರ ಸುಧಾಕರನ್ ಅವರು ಶನಿವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. 

4 ವರ್ಷಗಳ ಜೈಲು ಶಿಕ್ಷೆಯ ನಂತರ ಸುಧಾಕರನ್ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ಸುಧಾಕರನ್ ಬಿಡುಗಡೆ​ಯಾಗುತ್ತಿದ್ದಂತೆ ಬೆಂಬಲಿಗರು ಸುಧಾಕರನ್ ಪರವಾಗಿ ಘೋಷಣೆ ಕೂಗಿ ಬರಮಾಡಿಕೊಂಡರು. ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆಯೇ ಸುಧಾಕರನ್ ಅವರು ಚೆನ್ನೈಗೆ ತೆರಳಿದರು. 

ಅಕ್ರಮ ಆಸ್ತಿ ಸಂಪಾದಿಸದ್ದ ಆರೋಪದ ಮೇಲೆ ಶಶಿಕಲಾ ನಟರಾಜನ್​ಗೆ ಜೈಲು ವಾಸ ನೀಡಲಾಗಿತ್ತು. ಸುಮಾರು 4 ವರ್ಷಗಳ ನಂತರ ಅಂದರೆ ಇದೇ ವರ್ಷ ಜನವರಿ 27ಕ್ಕೆ ಇವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಿಡುಗಡೆ ಮಾಡಲಾಗಿತ್ತು. ಶಶಿಕಲಾ ರಿಲೀಸ್ ಆದ ದಿನವೇ ಜಯಲಲಿತಾ ದತ್ತುಪುತ್ರ ಸುಧಾಕರನ್ ಬಿಡುಗಡೆಯಾಗಬೇಕಿತ್ತು. ಆದರೆ ದಂಡ ಕಟ್ಟದ ಕಾರಣ ಬಿಡುಗಡೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಒಂದು ವರ್ಷ ಹೆಚ್ಚು ಕಾಲ ಜೈಲು ವಾಸವನ್ನು ಅನುಭವಿಸಬೇಕಾಯಿತು.

ಅಕ್ರಮ ಆಸ್ತಿ ಸಂಪಾದನೆ ಆರೋಪದಡಿಯಲ್ಲಿ 2017 ರಲ್ಲಿ ಶಶಿಕಲಾ, ಇಳವರೆಸಿ, ಸುಧಾಕರನ್ ಸೇರಿ ಮೂವರೂ ಶಿಕ್ಷೆಗೆ ಒಳಗಾಗಿ ಹತ್ತು ಕೋಟಿ ದಂಡ ವಿಧಿಸಲಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com