ಕೆಲಸ ಕೊಡಿಸುವುದಾಗಿ ಹೇಳಿ 500 ಮಂದಿಗೆ ವಂಚನೆ: ಕೆಎಸ್ಆರ್'ಟಿಸಿ ಚಾಲಕ ಸೇರಿ ಇಬ್ಬರ ಬಂಧನ

ಕೆಲಸ ಕೊಡಿಸುವುದಾಗಿ ಹೇಳಿ 500 ಮಂದಿಗೆ ವಂಚನೆ ಮಾಡಿದ್ದ ಕೆಎಸ್ಆರ್'ಟಿಸಿ ಚಾಲಕ ಸೇರಿ ಇಬ್ಬರು ಆರೋಪಿಗಳನ್ನು ಮಾಗಡಿ ರಸ್ತೆ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕೆಲಸ ಕೊಡಿಸುವುದಾಗಿ ಹೇಳಿ 500 ಮಂದಿಗೆ ವಂಚನೆ ಮಾಡಿದ್ದ ಕೆಎಸ್ಆರ್'ಟಿಸಿ ಚಾಲಕ ಸೇರಿ ಇಬ್ಬರು ಆರೋಪಿಗಳನ್ನು ಮಾಗಡಿ ರಸ್ತೆ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. 

ಬಳ್ಳಾರಿಯ ಹಗರಿಬೊಮ್ಮನಹಳ್ಳಿ ಮೂಲದ ಮಂಜುನಾಥ್‌ ಬಿಲ್ಲಾ ನಾಯಕ್‌ (49) ಹಾಗೂ ಆತನ ಸ್ನೇಹಿತ ಅನಿಲ್‌ (38) ಬಂಧಿತರಾಗಿದ್ದಾರೆ. 

ಆರೋಪಿಗಳು ಸುಮಾರು 500ಕ್ಕೂ ಅಧಿಕ ಮಂದಿಗೆ ಸುಮಾರು 15-18 ಕೋಟಿ ರೂ. ವಂಚಿಸಿದ್ದಾನೆ ಎಂದು ಹೇಳಲಾಗಿದೆ. ಆದರೆ, ಆತನ ಖಾತೆ ಪರಿಶೀಲಿಸಿದಾಗ ಸುಮಾರು 2.5 ಕೋಟಿ ರೂ. ಹಣ ಇರುವುದು ಪತ್ತೆಯಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com