1971ರ ಯುದ್ಧವು ಐತಿಹಾಸಿಕ ಯುದ್ಧ; ಮಾನವೀಯತೆ, ಪ್ರಜಾಪ್ರಭುತ್ವದ ಘನತೆಯ ರಕ್ಷಣೆಗಾಗಿ ನಡೆದ ಹೋರಾಟ: ರಾಜನಾಥ್ ಸಿಂಗ್
1971ರ ಯುದ್ಧವು ಐತಿಹಾಸಿಕ ಯುದ್ಧಗಳಲ್ಲಿ ಒಂದಾಗಿದ್ದು, ಮಾನವೀಯತೆ, ಪ್ರಜಾಪ್ರಭುತ್ವದ ಘನತೆಯ ರಕ್ಷಣೆಗಾಗಿ ನಡೆದ ಹೋರಾಟವಾಗಿತ್ತು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
Published: 22nd October 2021 05:08 PM | Last Updated: 22nd October 2021 05:47 PM | A+A A-

ರಾಜನಾಥ್ ಸಿಂಗ್
ಬೆಂಗಳೂರು: 1971ರ ಯುದ್ಧ ಐತಿಹಾಸಿಕ ಯುದ್ಧಗಳಲ್ಲಿ ಒಂದಾಗಿದ್ದು, ಮಾನವೀಯತೆ, ಪ್ರಜಾಪ್ರಭುತ್ವದ ಘನತೆಯ ರಕ್ಷಣೆಗಾಗಿ ನಡೆದ ಹೋರಾಟವಾಗಿತ್ತು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
Karnataka | Defence Minister Rajnath Singh today visited the Aeronautical Development Establishment (ADE) facility in Bengaluru pic.twitter.com/W6UnOqxZpH
— ANI (@ANI) October 22, 2021
2 ದಿನಗಳ ರಾಜ್ಯ ಪ್ರವಾಸದಲ್ಲಿರುವ ರಾಜನಾಥ್ ಸಿಂಗ್ ಅವರು ಇಂದು ಬೆಂಗಳೂರಿನಲ್ಲಿ ಭಾರತೀಯ ವಾಯುಪಡೆಯ ರಾಷ್ಟ್ರೀಯ ಸಮಾವೇಶದ ಉದ್ಘಾಟನಾ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಭದ್ರತಾ ಪಡೆಗಳನ್ನು ಉದ್ದೇಶಿಸಿ ಮಾತನಾಡಿದ ಅವರು, 3 ದಿನಗಳ ಕಾನ್ಕ್ಲೇವ್ ನಲ್ಲಿ ಪಾಲ್ಗೊಂಡಿದ್ದಕ್ಕಾಗಿ ನಮ್ಮ ವಾಯುಪಡೆ ಸಿಬ್ಬಂದಿಗಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. 1971 ರ ಯುದ್ಧವು ಇತಿಹಾಸದ ಕೆಲವು ಯುದ್ಧಗಳಲ್ಲಿ ಒಂದಾಗಿದೆ, ಅದು ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳಲು ಅಥವಾ ಅಧಿಕಾರವನ್ನು ಪಡೆದುಕೊಳ್ಳಲು ಹೋರಾಡಿದ್ದಲ್ಲ. ಬದಲಿಗೆ ಮಾನವೀಯತೆ ಮತ್ತು ಪ್ರಜಾಪ್ರಭುತ್ವದ ಘನತೆಯನ್ನು ರಕ್ಷಿಸುವುದು ಮುಖ್ಯ ಉದ್ದೇಶವಾಗಿತ್ತು ಎಂದು ಹೇಳಿದರು.
Raksha Mantri Shri @rajnathsingh visits the Aeronautical Development Establishment (ADE) facility in Bengaluru.@DefenceMinIndia @AjaybhattBJP4UK @drajaykumar_ias @PIB_India pic.twitter.com/twkYcMY9Jn
— A. Bharat Bhushan Babu (@SpokespersonMoD) October 22, 2021
ಇದಕ್ಕೂ ಮೊದಲು ಏರೋನಾಟಿಕಲ್ ಡೆವೆಲಪ್ಮೆಂಟ್ ಎಸ್ಟಾಬ್ಲಿಷ್ಮೆಂಟ್ ಗೆ ಭೇಟಿ ನೀಡಿದ ರಕ್ಷಣಾ ಸಚಿವರು, ಲಘು ವಿಮಾನ ತೇಜಸ್ ಸಿಮ್ಯೂಲೇಟರನ್ ಕಾರ್ಯ ವಿಧಾನವನ್ನು ವೀಕ್ಷಿಸಿದರು. ಈ ಕುರಿತ ತಮ್ಮ ಅನುಭವವನ್ನು ಟ್ವಿಟರ್ ನಲ್ಲಿ ಹಂಚಿಕೊಂಡ ಅವರು ಎಲ್ ಸಿಎ ತೇಜಸ್ ಸಿಮ್ಯುಲೇಟರ್ ಚಲಾಯಿಸಿದ ಅನುಭವ ಅದ್ಭುತವಾಗಿತ್ತು ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಸುಧಾಮನ ಮನೆಗೆ ಕೃಷ್ಣ ಬಂದಂತೆ, 106 ವರ್ಷದ ಬಿಜೆಪಿ ಹಿರಿಯ ಕಾರ್ಯಕರ್ತರನ್ನು ಭೇಟಿ ಮಾಡಿದ ರಾಜನಾಥ್ ಸಿಂಗ್!
ಅಂತೆಯೇ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೆಂಗಳೂರಿನಲ್ಲಿಂದು ರಕ್ಷಣಾ ಅಭಿವೃದ್ಧಿ ಮತ್ತು ಸಂಶೋಧನಾ ಕೇಂದ್ರ - ಡಿ.ಆರ್.ಡಿ.ಒ ಗೆ ಭೇಟಿ ನೀಡಿ ರಕ್ಷಣಾ ಉತ್ಪನ್ನಗಳ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿದರು.
Hon'ble Raksha Mantri visited Aeronautical Development Establishment (ADE), DRDO today. He congratulated the DRDO scientist for successful development of various defence products & platforms pic.twitter.com/bqNwOsyue0
— DRDO (@DRDO_India) October 22, 2021
ಈ ಹಿಂದೆ ರಕ್ಷಣಾ ಸಚಿವಾಲಯದ ಸಮಾಲೋಚನಾ ಸಮಿತಿಯ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ್ದ ಅವರು, ಕಳೆದ ಕೆಲವು ವರ್ಷಗಳಲ್ಲಿ, ಡಿಪಿಎಸ್ಯುಗಳ ಮೂಲಕ ಸರ್ಕಾರವು ವಿವಿಧ ರಕ್ಷಣಾ ಸಾಧನಗಳ ಉತ್ಪಾದನಾ ಸೌಲಭ್ಯಗಳನ್ನು ಸ್ಥಾಪಿಸಲು ಅನುಕೂಲ ಮಾಡಿಕೊಟ್ಟಿದೆ. 2024-25ರ ವೇಳೆಗೆ ರಕ್ಷಣಾ ಉತ್ಪನ್ನಗಳ ರಫ್ತು ಹೆಚ್ಚಿಸುವ ಗುರಿ ಹೊಂದಿದ್ದೇವೆ. ಭಾರತವನ್ನು ಸಾರ್ವಜನಿಕ ಮತ್ತು ಖಾಸಗಿ ವಲಯದ ಸಕ್ರಿಯ ಪಾಲುದಾರಿಕೆಯೊಂದಿಗೆ ರಕ್ಷಣಾ ವಲಯದಲ್ಲಿ ಸ್ವಾವಲಂಬಿಗಳನ್ನಾಗಿ ಮಾಡುವುದು ಮಾತ್ರವಲ್ಲದೆ, ವಿಶ್ವದ ಅಗ್ರ ರಾಷ್ಟ್ರಗಳಲ್ಲಿ ಸ್ಥಾನ ಪಡೆಯುವುದು ನಮ್ಮ ಗುರಿಯಾಗಿದೆ ಎಂದು ಹೇಳಿದರು.