ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಲಸಿಕೆ ಅಭಿಯಾನವನ್ನು ಮುಂದಿನ ದಿನಗಳಲ್ಲಿ ತೀವ್ರಗೊಳಿಸಲು ಬಿಬಿಎಂಪಿ ನಿರ್ಧರಿಸಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಬಿಬಿಎಂಪು ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು, ಎಲ್ಲಾ ಸಿಬ್ಬಂದಿಗಳು ಹಾಗೂ ಅಧಿಕಾರಿಗಳ ಸಹಾಯದೊಂದಿಗೆ ಲಸಿಕಾ ಅಭಿಯಾನ ಪರಿಣಾಮಕಾರಿ ರೀತಿಯಲ್ಲಿ ನಡೆಸಲಾಗುತ್ತಿದ್ದು, ಹೀಗಾಗಿಯೇ ನಗರದಲ್ಲಿ ಸೋಂಕು ಪ್ರಕರಣಗಳು ಕಡಿಮೆಯಾಗಿದೆ. ಮುಂದಿನ ದಿನಗಳಲ್ಲಿ ಲಸಿಕೆ ಅಭಿಯಾನವನ್ನು ಮತ್ತಷ್ಟು ತೀವ್ರಗೊಳಿಸಲಾಗುತ್ತದೆ ಎಂದು ಹೇಳಿದ್ದಾರೆ.
ಈ ವರೆಗೂ ಲಸಿಕೆ ಪಡೆದುಕೊಳ್ಳಲು ಅರ್ಹರಿರುವ ಶೇ.86 ರಷ್ಟು ಜನರಿಗೆ ಮೊದಲ ಡೋಸ್ ಹಾಗೂ ಶೇ.52ರಷ್ಟು ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
Advertisement