ಪಟಾಕಿಗಳ ವಿರುದ್ಧ ಜಾಹೀರಾತು: ಬಾಲಿವುಡ್ ನಟ ಅಮಿರ್ ಖಾನ್ ವಿರುದ್ಧ ಸಂಸದ ಅನಂತ್ ಕುಮಾರ್ ಹೆಗಡೆ ಕಿಡಿ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸದಿರಿ ಎಂದು ಜಾಹೀರಾತೊಂದರಲ್ಲಿ ಬಾಲಿವುಡ್ ನಟ ಅಮೀರ್ ಖಾನ್ ಅವರು ಮನವಿ ಮಾಡಿಕೊಂಡಿರುವುದಕ್ಕೆ ಸಂಸದ ಅನಂತ್ ಕುಮಾರ್ ಹೆಗಡೆಯವರು ತೀವ್ರವಾಗಿ ಕಿಡಿಕಾರಿದ್ದಾರೆ.
ಅಮಿರ್ ಖಾನ್
ಅಮಿರ್ ಖಾನ್

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸದಿರಿ ಎಂದು ಜಾಹೀರಾತೊಂದರಲ್ಲಿ ಬಾಲಿವುಡ್ ನಟ ಅಮೀರ್ ಖಾನ್ ಅವರು ಮನವಿ ಮಾಡಿಕೊಂಡಿರುವುದಕ್ಕೆ ಸಂಸದ ಅನಂತ್ ಕುಮಾರ್ ಹೆಗಡೆಯವರು ತೀವ್ರವಾಗಿ ಕಿಡಿಕಾರಿದ್ದಾರೆ.

ಈ ಕುರಿತು ಜಾಹೀರಾತು ಕಂಪನಿಗೆ ಪತ್ರವನ್ನು ಬರೆದಿರುವ ಅನಂತ್ ಕುಮಾರ್ ಹೆಗಡೆಯವರು, ತಮ್ಮ ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ.

ಪರಿಸರವಾದಿ, ಪ್ರಾಣಿಪ್ರೇಮಿ ಅಮೀರ್ ಖಾನ್ ಅಭಿನಯಿಸಿರುವ ಜಾಹೀರಾತು ಒಂದರಲ್ಲಿ ದೀಪಾವಳಿ ಹಬ್ಬದಲ್ಲಿ ಹಿಂದುಗಳಿಗೆ ಪಟಾಕಿ ಸಿಡಿಸದಂತೆ ಮನವಿ ಮಾಡಿದ್ದಾರೆ. ಅವರು ಪರಿಸರ ಹಾಗೂ ಪ್ರಾಣಿಗಳ ಬಗ್ಗೆ ತೋರುತ್ತಿರುವ ಕಾಳಜಿಗೆ ನನ್ನ ಮೆಚ್ಚುಗೆ! ಅದರಂತೆ ಅನ್ಯಧರ್ಮಗಳಲ್ಲಿ (ತಾನು ಪ್ರತಿಪಾದಿಸುವ ಧರ್ಮವನ್ನು ಹಿಡಿದು) ನಡೆಯುವ ಎಷ್ಟೋ ಆಚರಣೆಗಳ ಬಗ್ಗೆ ಏಕೆ ಮೌನ?

ಈ ಜಾಹಿರಾತನ್ನು ಅನಂತ ವರಧಾನ್ ಗೋಯೆಂಕ ಮಾಲೀಕತ್ವದ ಸಿಇಎಟಿ ಸಂಸ್ಥೆಯು ಪ್ರಸ್ತುತ ಪಡೆಸಿದ್ದು, ಈ ಕೂಡಲೇ ಈ ಜಾಹೀರಾತನ್ನು ಹಿಂಪಡೆಯಬೇಕು ಹಾಗೂ ಹಿಂದೂಗಳೇ ಆಗಿರುವ ಅವರು ಹಿಂದುಗಳ ಭಾವನೆಗಳಿಗೆ ಧಕ್ಕೆ ಬಾರದಂತೆ ನೋಡಿಕೊಳ್ಳಬೇಕಾಗಿ ಆಗ್ರಹಿಸುತ್ತೇನೆ ಎಂದಿದ್ದಾರೆ.

ಸಂಸದ ಅನಂತ್ ಕುಮಾರ್ ಹೆಗಡೆ ಈ ಪತ್ರವನ್ನು ತಮ್ಮ ಫೇಸ್ ಬುಕ್ ಖಾತೆಯಲ್ಲೂ ಹಂಚಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com