ಬೆಂಗಳೂರು: ಮಹಾನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ ಅತೀವೇಗವಾಗಿ ಚಲಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಸಾವು ಸಂಭವಿಸಿಲ್ಲ.
ಇಂದು ಬೆಳಗ್ಗೆ ದುರ್ಘಟನೆ ನಡೆದಿದೆ. ವಿಮಾನ ನಿಲ್ದಾಣ ರಸ್ತೆಯ ಕಾಡಿಗೇನಹಳ್ಳಿ ಗೇಟ್ ಬಳಿ ಅತೀ ವೇಗದಿಂದ ಬಂದ ಕಾರು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದು ಸನಿಹದ ಮೋರಿಯೊಳಗೆ ಬಿದ್ದು ಸಿಲುಕಿಕೊಂಡಿದೆ. ಇದರಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಆದರೆ ಪವಾಡ ಸದೃಶ ರೀತಿಯಲ್ಲಿ ಕಾರಿನಲ್ಲಿದ್ದ ಯುವಕ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸುದ್ದಿ ತಿಳಿದ ಕೂಡಲೇ ಚಿಕ್ಕಜಾಲ ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಪ್ರಕರಣ ದಾಖಲಾಗಿದೆ. ಇತ್ತೀಚಿಗೆ ಮಹಾನಗರದ ವ್ಯಾಪ್ತಿಯಲ್ಲಿ ಐಷಾರಾಮಿ ಕಾರುಗಳನ್ನು ಮದ್ಯಪಾನ ಮಾಡಿ ಮೋಜಿನಿಂದ ಅತೀವೇಗವಾಗಿ ಚಲಾಯಿಸಿ ಅಪಘಾತಕ್ಕೆ ಕಾರಣವಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಪ್ರಕರಣದಲ್ಲಿ ಕಾರು ಚಲಾಯಿಸುತ್ತಿದ್ದವರು ಅತೀವೇಗವಾಗಿ ಕಾರು ಚಲಾಯಿಸಿ ನಿಯಂತ್ರಣ ಕಳೆದುಕೊಳ್ಳಲು ಕಾರಣವೇನು ಎಂಬುದನ್ನು ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Advertisement