ಅಧಿಕಾರಿಗಳ ಸ್ವಯಂ ಪ್ರಕ್ರಿಯೆಗೆ ತಡೆ: ದೇವಾಲಯ ಸಂರಕ್ಷಣಾ ಮಸೂದೆಗೆ ರಾಜ್ಯಪಾಲರ ಅಂಕಿತ

ಧಾರ್ಮಿಕ ಸ್ಥಳಗಳ ದೇವಾಲಯ ಸ್ವರೂಪ ಸಂರಕ್ಷಣಾ ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಧಾರ್ಮಿಕ ಸ್ಥಳಗಳ ಸ್ವರೂಪ ಸಂರಕ್ಷಣಾ ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ.

ಇದರಿಂದಾಗಿ ದೇವಾಲಯಗಳನ್ನು ಹಠಾತ್ತನೆ ನೆಲಸಮ ಮಾಡುವ ಅಧಿಕಾರಿಗಳ ಸ್ವಯಂ ಪ್ರಕ್ರಿಯೆಗೆ ತಡೆ ಬಿದ್ದಿದೆ. ಕಳೆದ ವಿಧಾನಮಂಡಲ ಅಧಿವೇಶನದಲ್ಲಿ, ಈ ಮಸೂದೆಯನ್ನು ಅಂಗೀಕರಿಸಿ ನಂತರ ರಾಜ್ಯಪಾಲರ ಒಪ್ಪಿಗೆಗಾಗಿ ಕಳುಹಿಸಿಕೊಡಲಾಗಿತ್ತು. ಈಗ ದೇವಾಲಯಗಳ ಸ್ವರೂಪ ಸಂರಕ್ಷಣಾ ಮಸೂದೆ ಜಾರಿಗೆ ಈಗ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೈಸೂರಿನ ನಂಜನಗೂಡು ಬಳಿ ದೇವಾಲಯವನ್ನು ಹಠಾತ್ತನೆ ನೆಲಸಮ ಮಾಡಿದ್ದ ವಿಚಾರ ವಿಧಾನ ಮಂಡಲದ ಉಭಯ ಸದನಗಳಲ್ಲಿ ಬಾರಿ ಕೋಲಾಹಲದ ಚರ್ಚೆಗೆ ಗ್ರಾಸವಾಗಿತ್ತು. ಅಂತರ ನಂತರ ನೆಲಸಮಗೊಂಡ ಜಾಗದಲ್ಲಿ ದೇವಾಲಯ ನಿರ್ಮಿಸುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿತ್ತು. ಅಧಿಕಾರಿಗಳ ಉದ್ಧಟತನದಿಂದ ಇಂತಹ ದ ಘಟನೆಗಳು ಮುಂದೆ ನಡೆಯದಂತೆ ಧಾರ್ಮಿಕ ಸ್ಥಳಗಳ ಸ್ವರೂಪ ಸಂರಕ್ಷಣೆ ಮಾಡುವ ಮಸೂದೆಯನ್ನು ವಿಧಾನಮಂಡಲದ ಉಭಯ ಸದನಗಳಲ್ಲಿ ಸರ್ಕಾರ ಮಂಡನೆ ಮಾಡಿತ್ತು ನಂತರ ಅಂಗೀಕರಿಸಿತ್ತು .

ರ ಈ ವಿಚಾರ ಆಡಳಿತರೂಢ ಬಿಜೆಪಿಗೆ ತುಂಬಾ ಮುಜುಗರದ ಸನ್ನಿವೇಶ ನಿರ್ಮಾಣ ಮಾಡಿತ್ತು . ಮತ್ತು ಹಿಂದುತ್ವ ಮತ್ತು ದೇವಾಲಯಗಳಬಹಳ ಗ್ಗೆ ಮಾತನಾಡುವ ಬಿಜೆಪಿ ಸರ್ಕಾರದ ಅವಧಿಯಲ್ಲಿ ದೇವಾಲಯಗಳು ನೆಲಸಮ ಗೊಳ್ಳುತ್ತಿವೆ, ಧಾರ್ಮಿಕ ವಿಚಾರವನ್ನು ಕೇವಲ ಮತ ಬಳಕೆಗೆ ಮಾತ್ರ ಬಿಜೆಪಿ ಬಳಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸರ್ಕಾರದ ನಿಲುವನ್ನು ತರಾಟೆಗೆ ತೆಗೆದುಕೊಂಡಿದ್ದವು.

ಈ ವಿಚಾರ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಇದು ಸರ್ಕಾರದ ಮತ್ತು ಪಕ್ಷದ ಭವಿಷ್ಯಕ್ಕೆ ಮುಂದೆ ಪೆಟ್ಟು ಕೊಡಲಿದೆ ಎಂಬುದನ್ನು ಅರಿತ ಸರ್ಕಾರ, ಮುಂದೆ ಯಾವುದೇ ರೀತಿಯಲ್ಲೂ ಇಂತಹ ಅತಾಚಾತುರ್ಯದ ಘಟನೆಗಳು ನಡೆಯದಂತೆ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿತ್ತು. ಯಾವುದೇ ದೇವಾಲಯಗಳನ್ನು ನೆಲಸಮ ಮಾಡುವ ಮುಂಚೆ ಸರ್ಕಾರಕ್ಕೆ ತಿಳಿಸಿ ಅನುಮತಿ ಪಡೆಯುವ ಉದ್ದೇಶದಿಂದ ಈ ಮಸೂದೆ ಜಾರಿಗೆ ತರಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com