ಬೆಂಗಳೂರು: ಬೆಂಗಳೂರಿನ ವಿದ್ಯಾನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ನವವಿವಾಹಿತ ದಂಪತಿ ನೇಣಿಗೆ ಶರಣಾಗಿದ್ದಾರೆ.
ಕಟ್ಟಡ ನಿರ್ಮಾಣ ಕಾರ್ಮಿಕ ಸಾಗರ್ (24) ಮತ್ತು ಆತನ ಪತ್ನಿ ಸಾವನ್ನಪ್ಪಿದ್ದಾರೆ. ಪತ್ನಿಯ ಹೆಸರು ತಿಳಿದು ಬಂದಿಲ್ಲ. ಆರು ತಿಂಗಳ ಹಿಂದಷ್ಟೇ ವಿವಾಹವಾಗಿದ್ದು, ಜೀವನಕ್ಕಾಗಿ ಬೆಂಗಳೂರಿಗೆ ಬಂದಿದ್ದರು.
ದಂಪತಿ ಸಾವಿಗೆ ಕಾರಣ ಇನ್ನೂ ತಿಳಿದು ಬಂದಿಲ್ಲ, ದಂಪತಿ ತಮ್ಮ ಸಂಬಂಧಿಕರ ಫೋನ್ ನಂಬರ್ ಬರೆದಿಟ್ಟು ಸಾವನ್ನಪ್ಪಿದ್ದಾರೆ. ನಾಲ್ಕು ದಿನಗಳ ಹಿಂದೆ ಹಗ್ಗಕ್ಕೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಶವಗಳು ಕೊಳೆತ ಸ್ಥಿತಿ ತಲುಪಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಯುವ ಮುನ್ನ ದಂಪತಿ ವಿವಿಧ ಬಗೆಯ ಊಟ ಮಾಡಿದ್ದಾರೆ. ಉಳಿದ ಊಟ ಮನೆಯಲ್ಲಿ ಪತ್ತೆಯಾಗಿದೆ. ಅವರ ಸಂಬಂಧಿಕರು ಬಂದ ನಂತರ ಮರಣೋತ್ತರ ಪರೀಕ್ಷೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ. ಪಶ್ಚಿಮ ಬಂಗಾಳದಿಂದ ಬಂದಿರುವ ವಲಸೆ ಕಾರ್ಮಿಕರು ಎಂದು ಪೊಲೀಸರು ತಿಳಿಸಿದ್ದಾರೆ.
Advertisement