ಚಾಮರಾಜನಗರ: ಪ್ರಕರಣದ ವಿಚಾರಣೆಗೆ ಬಂದಿದ್ದಾಗ ಕುಸಿದು ಬಿದ್ದು ನಗರಸಭಾ ಸದಸ್ಯ ಸಾವು

ಪ್ರಕರಣವೊಂದರ ವಿಚಾರಣೆಗಾಗಿ ಜಿಲ್ಲಾ ನ್ಯಾಯಾಲಯಕ್ಕೆ ಬಂದಿದ್ದ‌ ನಗರಸಭಾ ಸದಸ್ಯರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚಾಮರಾಜನಗರ: ಪ್ರಕರಣವೊಂದರ ವಿಚಾರಣೆಗಾಗಿ ಜಿಲ್ಲಾ ನ್ಯಾಯಾಲಯಕ್ಕೆ ಬಂದಿದ್ದ‌ ನಗರಸಭಾ ಸದಸ್ಯರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.

ಮೃತರನ್ನು ನಗರಸಭೆಯ 6ನೇ ವಾರ್ಡ್ ಸದಸ್ಯ 45 ವರ್ಷದ ಸಮೀವುಲ್ಲಾ ಖಾನ್ ಎಂದು ಗುರುತಿಸಲಾಗಿದೆ. ಗಾಳಿಪುರ ಬಡಾವಣೆಯ ಅಹಮದ್ ಮೊಹಲ್ಲಾ ನಿವಾಸಿಯಾಗಿದ್ದ ಸಮೀವುಲ್ಲಾ ಖಾನ್ ಎಸ್ ಡಿಪಿಐ ಜಿಲ್ಲಾ ಘಟಕದ ಉಪಾಧ್ಯಕ್ಷರೂ ಆಗಿದ್ದರು. 

ಕಲಾಪ ಆರಂಭಕ್ಕೂ ಮುನ್ನ ನ್ಯಾಯಾಲಯದ ಆವರಣದಲ್ಲಿ ನಿಂತಿದ್ದ ಸಮೀವುಲ್ಲಾ ಇದ್ದಕ್ಕಿದ್ದಂತೆ ತೀವ್ರ ಎದೆನೋವು ಎಂದು ಹೇಳಿ ಕುಸಿದು ಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆ ವೇಳೆಗೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. 

ಸಮೀವುಲ್ಲಾ ಅವರು ನಾಲ್ಕು ವರ್ಷಗಳ ಹಿಂದೆ ಆಂಜಿಯೋಪ್ಲ್ಯಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಎಂದು ಎಸ್ ಡಿಪಿಐ ಮುಖಂಡ ಆರೀಫ್ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com