social_icon

ಸಿಸಿಬಿ ಭರ್ಜರಿ ಕಾರ್ಯಾಚರಣೆ: ಕುಖ್ಯಾತ ಡ್ರಗ್ ಪೆಡ್ಲರ್‌ಗಳ ಬಂಧನ; 2 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ

ಕೇಂದ್ರ ಅಪರಾಧ ವಿಭಾಗ ಮಾದಕ ವಸ್ತು ನಿಗ್ರಹ ದಳ ಇಂದು  ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಜಾರ್ಖಂಡ್‌ನ ಕುಖ್ಯಾತ ಡ್ರಗ್ ಫೆಡ್ಲರ್‌ಗಳನ್ನು ಬಂಧಿಸಿ ಅವರಿಂದ ಸುಮಾರು 2 ಕೋಟಿ ಮೌಲ್ಯದ ಮಾದಕವಸ್ತುಗಳನ್ನು ವಶಕ್ಕೆ ಪಡೆದಿದೆ.

Published: 03rd September 2021 01:40 PM  |   Last Updated: 03rd September 2021 02:03 PM   |  A+A-


CCB has seized Rs 2 cr worth of drugs

ಅಪಾರ ಪ್ರಮಾಣದ ಮಾದಕ ವಸ್ತು ವಶಕ್ಕೆ

Posted By : Srinivasamurthy VN
Source : ANI

ಬೆಂಗಳೂರು: ಕೇಂದ್ರ ಅಪರಾಧ ವಿಭಾಗ ಮಾದಕ ವಸ್ತು ನಿಗ್ರಹ ದಳ ಇಂದು  ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಜಾರ್ಖಂಡ್‌ನ ಕುಖ್ಯಾತ ಡ್ರಗ್ ಫೆಡ್ಲರ್‌ಗಳನ್ನು ಬಂಧಿಸಿ ಅವರಿಂದ ಸುಮಾರು 2 ಕೋಟಿ ಮೌಲ್ಯದ ಮಾದಕವಸ್ತುಗಳನ್ನು ವಶಕ್ಕೆ ಪಡೆದಿದೆ.

ಬಂಧಿತ ಜಾರ್ಖಂಡ್ ಮೂಲದ ಇಬ್ಬರು ಡ್ರಗ್ ಫೆಡ್ಲರ್‌ಗಳಿಂದ 150 ಎಂಡಿಎಂಎ ಮತ್ತು ಎಕ್ಸಟೆಂಟ್ ಮಾತ್ರೆಗಳು, 400 ಗ್ರಾಂ ಚೆರಸ್ ಉಂಡೆಗಳು, 180 ಎಸ್‌ಎಲ್‌ಡಿ ಸ್ಟ್ರಿಪ್‌ಗಳು 3,520 ಗ್ರಾಂ ಆಶಿಶ್ ಆಯಿಲ್, 50 ಗ್ರಾಂ ಐಡ್ರೋ ಗಾಂಜಾ, 30 ಕೆಜಿ ಗಾಂಜಾ, 2 ಮೊಬೈಲ್, 2 ಎಲೆಕ್ಟ್ರಾನಿಕ್ ತೂಕದ ಯಂತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳಿಂದ ವಶಪಡಿಸಿಕೊಂಡಿರುವ ಮಾದಕ ವಸ್ತುಗಳು ಹಾಗೂ ಇನ್ನಿತರ ವಸ್ತುಗಳ ಮೌಲ್ಯ 2 ಕೋಟಿ ರೂ.ಗಳೆಂದು ಅಂದಾಜಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ದೆಹಲಿ ಮೂಲದ ಖದೀಮನೊಬ್ಬ ಡಾರ್ಕ್‌ವೆಬ್‌ಸೈಟ್‌ನ ಟಾರ್ ಬ್ರೌಸರ್ ಬಳಸಿಕೊಂಡು ವಿಕ್ಕರ್ ಮೀ ವೆಬ್‌ಸೈಟ್‌ನಿಂದ ವಿದೇಶಿ ಎಜೆಂಟ್ ಗೆ ಬಿಟ್ ಕಾಯಿನ್ ಮೂಲಕ ಹಣ ಪಾವತಿಸಿ ವಿದೇಶದಿಂದ ಕಡಿಮೆ ಬೆಲೆಗೆ ಮಾತ್ರೆಗಳು, ಚೆರಸ್ ಉಂಡೆಗಳು, ಎಸ್‌ಎಲ್‌ಡಿ ಸ್ಟ್ರಿಪ್‌ಗಳು. ಆಶಿಶ್ ಆಯಿಲ್, ಐಡ್ರೋ ಗಾಂಜಾ, ಗಾಂಜಾ ಇನ್ನತರ ಮಾದಕ ವಸ್ತುಗಳನ್ನು ಖರೀದಿಸುತ್ತಿದ್ದನು. ಅವುಗಳನ್ನು ಗ್ರಾಹಕರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಜಾರ್ಖಂಡ್ ಮೂಲದ ಇಬ್ಬರು ಬಂಧಿತ ಆರೋಪಿಗಳಿಗೆ ತಿಂಗಳ ಸಂಬಳ ನೀಡಿ ವೈಟ್‌ಫೀಲ್ಡ್‌ನಲ್ಲಿ ಬಾಡಿಗೆ ಮನೆ ಮಾಡಿಕೊಟ್ಟು ಇರಿಸಿದ್ದ. ಅಲ್ಲಿಂದ ಮಾದಕವಸ್ತುಗಳನ್ನು ಇನ್ನಿಬ್ಬರು ಸ್ಥಳೀಯ ವ್ಯಕ್ತಿಗಳ ಜತೆ ಸೇರಿ ಐಟಿ-ಬಿಟಿ ಕಂಪನಿಯ ಉದ್ಯೋಗಿಗಳಿಗೆ ಸರಬರಾಜು ಮಾಡಿ ಹೆಚ್ಚಿನ ಹಣ ಗಳಿಸುವ ದಂಧೆ ನಡೆಸುತ್ತಿದ್ದ ಎಂದು ಸಂದೀಪ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ಅಲ್ಲದೆ ಡ್ರಗ್ಸ್ ಖರೀದಿಸುತ್ತಿದ್ದ ಗ್ರಾಹಕನೊಬ್ಬ ನೀಡಿದ ಮಾಹಿತಿಯಾಧರಿಸಿ ಕಾರ್ಯಾಚರಣೆ ಕೈಗೊಂಡ ಸಿಸಿಬಿ ಪೊಲೀಸರ ವಿಶೇಷ ತಂಡದ ಅಧಿಕಾರಿಗಳು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ನಗರದಲ್ಲಿ ಇತ್ತೀಚೆಗೆ ನಡೆದ ಅತಿ ದೊಡ್ಡ ಕಾರ್ಯಾಚರಣೆ ಇದಾಗಿದ್ದು, ಬಂಧಿತ ಆರೋಪಿಗಳಿಗೆ ಸಂಬಳ ನೀಡಿ ಮಾದಕ ವಸ್ತುಗಳನ್ನು ಮಾರಾಟ ಮಾಡಿಸುತ್ತಿದ್ದ. ದೆಹಲಿ ಮೂಲದ ನಟೋರಿಯಸ್ ಟ್ರಗ್ ಫೆಡ್ಲರ್‌ಗಳಿಗಾಗಿ ಶೋಧ ನಡೆಸಲಾಗಿದೆ ಎಂದು ಸಂದೀಪ್ ಪಾಟೀಲ್ ತಿಳಿಸಿದ್ದಾರೆ.


Stay up to date on all the latest ರಾಜ್ಯ news
Poll
New parliament building

ಹೊಸ ಸಂಸತ್ ಕಟ್ಟಡದ ಉದ್ಘಾಟನೆಯನ್ನು ಬಹಿಷ್ಕರಿಸುವ ಹಲವಾರು ವಿರೋಧ ಪಕ್ಷಗಳ ನಿರ್ಧಾರವು ಸಮರ್ಥನೀಯವೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp