ವಿಜಯಪುರ, ಬಾಗಲಕೋಟೆಗಳಲ್ಲಿ ಕಡಿಮೆ ತೀವ್ರತೆಯ ಭೂಕಂಪನ
ಬೆಂಗಳೂರು: ವಿಜಯಪುರ, ಬಾಗಲಕೋಟೆಗಳಲ್ಲಿ ಸೆ.04 ರಂದು ಮಧ್ಯರಾತ್ರಿ ಕಡಿಮೆ ತೀವ್ರತೆಯ ಭೂಕಂಪನ ವರದಿಯಾಗಿದೆ. ಕರ್ನಾಟಕ ರಾಜ್ಯ ರಾಜ್ಯ ನೈಸರ್ಗಿಕ ವಿಪತ್ತು ನಿಗಾ ಕೇಂದ್ರ ಈ ಬಗ್ಗೆ ಮಾಹಿತಿ ನೀಡಿದ್ದು ಕೊಲ್ಹಾಪುರ ಜಿಲ್ಲೆಯಲ್ಲಿ 3.9 ತೀವ್ರತೆ ದಾಖಲಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಕಡಿಮೆ ತೀವ್ರತೆಯ ಕಂಪನ ಅನುಭವಕ್ಕೆ ಬಂದಿದೆ.
ವಿಜಯಪುರ ನಗರ, ಬಸವನ ಬಾಗೇವಾಡಿ, ಟಿಕೊಟಾ, ಇಂಡಿ, ಸಿಂಧಗಿಯಲ್ಲಿನ ಜನರು ರಾತ್ರಿ 11:30 ಕ್ಕೆ ಕಂಪನವಾಗುತ್ತಿದ್ದಂತೆಯೇ ಮನೆಯಿಂದ ಹೊರಬರಲಾರಂಭಿಸಿದರು. ಆದರೆ ಯಾವುದೇ ಆಸ್ತಿ ಹಾನಿಯಾದ ಬಗ್ಗೆ ಮಾಹಿತಿ ಬಂದಿಲ್ಲ.
ಕೀರ್ತಿ ನಗರದ ನಿವಾಸಿ ಶೇಖರಾಜ್ ಪಾಟೀಲ್ ಈ ಬಗ್ಗೆ ಮಾತನಾಡಿದ್ದು, "ಆಗ ನಿದ್ದೆ ಮಾಡುವ ಸಮಯವಾಗಿತ್ತು, ಕಂಪನದ ಅನುಭವವಾಗುತ್ತಿದ್ದಂತೆಯೇ ಕುಟುಂಬ ಸದಸ್ಯರು ಮನೆಯಿಂದ ಹೊರಬರಲಾರಂಭಿಸಿದೆವು. ಅರ್ಧಗಂಟೆಯ ಅವಧಿಯಲ್ಲಿ 2 ಕಂಪನಗಳ ಅನುಭವವಾಗಿತ್ತು ಎಂದು ಹೇಳಿದ್ದಾರೆ.
ಡಿ.ಸಿ ಸುನಿಲ್ ಕುಮಾರ್ ಮಾತನಾಡಿದ್ದು, "ವಿಪತ್ತು ನಿಗಾ ಕೇಂದ್ರ ಕಡಿಮೆ ತೀವ್ರತೆಯ ಕಂಪನ ವರದಿಯಾಗಿದೆ. ಜನತೆ ಆತಂಕ ಪಡುವ ಅಗತ್ಯವಿಲ್ಲ ಕೆಎಸ್ ಎನ್ ಡಿಎಂಸಿ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ" ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ