ಜಾತ್ರೆಗೆ ಹೊರಟವರ ಕ್ರೂಸರ್​ಗೆ ಬಸ್​ ಡಿಕ್ಕಿ: ಬಾಲಕ ಸಾವು, ಐವರಿಗೆ ಗಾಯ

ಮನೆದೇವರ ಜಾತ್ರೆಗೆ ಹೊರಟಿದ್ದವರ ಕ್ರೂಸರ್ ವಾಹನಕ್ಕೆ ಖಾಸಗಿ ಬಸ್​​ ವೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಬಾಲಕ ಮೃತಪಟ್ಟಿರುವ ಘಟನೆ ತಾಲೂಕಿನ ಜಂಗಮರ ಕಲ್ಗುಡಿ ಬಳಿ ಬುಧವಾರ ಬೆಳಗಿನಜಾವ ಸಂಭವಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಗಂಗಾವತಿ: ಮನೆದೇವರ ಜಾತ್ರೆಗೆ ಹೊರಟಿದ್ದವರ ಕ್ರೂಸರ್ ವಾಹನಕ್ಕೆ ಖಾಸಗಿ ಬಸ್​​ ವೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಬಾಲಕ ಮೃತಪಟ್ಟಿರುವ ಘಟನೆ ತಾಲೂಕಿನ ಜಂಗಮರ ಕಲ್ಗುಡಿ ಬಳಿ ಬುಧವಾರ ಬೆಳಗಿನಜಾವ ಸಂಭವಿಸಿದೆ.

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೆರಾದ 9 ವರ್ಷದ ಬಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಬೆಂಗಳೂರಿನಿಂದ ಲಿಂಗಸುಗೂರಿನ ಹಟ್ಟಿಗೆ ಹೊರಟಿದ್ದ ಬಸ್​, ಜವಳಗೆರಾದಿಂದ ಹರಿಹರಕ್ಕೆ ಹೊರಟಿದ್ದ ಕ್ರೂಸರ್ ಮಧ್ಯೆ ಅಪಘಾತ ಸಂಭವಿಸಿದೆ.

ಪರಿಣಾಮ ಕ್ರೂಸರ್ ನಲ್ಲಿದ್ದ ಓರ್ವ ಬಾಲಕ ಮೃತಪಟ್ಟಿದ್ದು, 5ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯರ ನೆರವಿನಿಂದ 112 ಗಸ್ತು ವಾಹನದ ಮೂಲಕ ಪೊಲೀಸರು ಗಂಗಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಸ್​​ ಚಾಲಕನ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com