ರಾಮನಗರ: ವಿದ್ಯುತ್ ಸ್ಪರ್ಶಿಸಿ ಒಂಟಿ ಸಲಗ ಸಾವು

ಗಣೇಶ ಚತುರ್ಥಿ ಹಬ್ಬದಂದೇ ಆನೆಯೊಂದು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ.
ಮೃತಪಟ್ಟಿರುವ ಆನೆ
ಮೃತಪಟ್ಟಿರುವ ಆನೆ
Updated on

ರಾಮನಗರ: ಗಣೇಶ ಚತುರ್ಥಿ ಹಬ್ಬದಂದೇ ಆನೆಯೊಂದು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ.

ತೆಂಗಿನಕಲ್ಲು  ಅರಣ್ಯ ವಲಯದ ಮಲ್ಲಂಗೆರೆ ಗ್ರಾಮದ ಎನ್.ಆರ್. ಕಾಲೋನಿ ಬಳಿ ತೋಟದಲ್ಲಿ ವಿದ್ಯುತ್ ಸ್ಪರ್ಶಿಸಿ ಗಂಡು ಆನೆ ಮೃತಪಟ್ಟಿದೆ. ಕಾಡಿನಿಂದ ಆಹಾರ ಅರಸಿ ನಾಡಿಗೆ ಬಂದಿದ್ದ ಗಜಪಡೆಯಲ್ಲಿ ಅಂದಾಜು 35 - 40 ವರ್ಷದ ಈ ಆನೆಗೆ ವಿದ್ಯುತ್ ತಂತಿ ತಗುಲಿದೆ. ಪರಿಣಾಮ ನೋವಿನಿಂದ ಕಿರುಚಿದ್ದಾಡಿದ್ದು, ಇತರ ಆನೆಗಳು  ಸ್ಥಳದಿಂದ ಕಾಲ್ಕಿತ್ತೀವೆ. 

ಇತ್ತೀಚಿಗೆ ಕಳೆದ ತಿಂಗಳು ಕಬ್ಬಾಳು ಅರಣ್ಯದಲ್ಲಿ 35 ವರ್ಷದ ಗಂಡಾನೆ ಮೃತಪಟ್ಟಿತ್ತು. ಈ ಬೆನ್ನಲ್ಲೆ ಈ ಆನೆ ಕೂಡ ಮೃತಪಟ್ಟಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿ. ಸ್ಥಳದಲ್ಲೆ ಮರಣೋತ್ತರ ಪರೀಕ್ಷೆ ನಡೆಸಿ ಅಂತಿಮ ಸಂಸ್ಕಾರ ಕೂಡ ಮಾಡಲಿದ್ದಾರೆ.          

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com