ತುಮಕೂರು: ಫೋನ್ ಪೇ ಮೂಲಕ ಲಂಚ ಪಡೆದ ಆರೋಪ - ಪಿಎಸ್ಐ ಅಮಾನತು

ಫೋನ್ ಪೇ ಮೂಲಕ ಲಂಚ ಪಡೆದ ಆರೋಪದಡಿ ಪಿಎಸ್ ಐ ಓರ್ವರನ್ನು  ಗಣೇಶನ ಹಬ್ಬದ ದಿನದಂದು ಅಮಾನತುಗೊಳಿಸಲಾಗಿದೆ.
ಫೋನ್ ಪೇ
ಫೋನ್ ಪೇ

ತುಮಕೂರು: ಫೋನ್ ಪೇ ಮೂಲಕ ಲಂಚ ಪಡೆದ ಆರೋಪದಡಿ ಪಿಎಸ್ ಐ ಓರ್ವರನ್ನು  ಗಣೇಶನ ಹಬ್ಬದ ದಿನದಂದು ಅಮಾನತುಗೊಳಿಸಲಾಗಿದೆ.

ಜಿಲ್ಲೆಯ ಗುಬ್ಬಿ ಟೌನ್ ಠಾಣೆಯ ಪಿಎಸ್ ಐ ಜ್ಞಾನಮೂರ್ತಿಯನ್ನು ಅಮಾನತುಗೊಳಿಸಿ ತುಮಕೂರು ಎಸ್‍ಪಿ ರಾಹುಲ್ ಕುಮಾರ್ ಶಹಾಪುರ್ ಆದೇಶಿಸಿದ್ದಾರೆ.

ಕಳೆದ ವಾರ ವಿನಾಕಾರಣ ಮ್ಯಾಕ್ಸಿಕ್ಯಾಬ್ ವೊಂದನ್ನು ತಡೆದು ಚಾಲಕನಿಗೆ ಕಿರುಕುಳ ನೀಡಿದ ಆರೋಪವನ್ನು ಪಿಎಸ್‍ಐ ಹೊತ್ತಿದ್ದರು. ಕ್ಯಾಬ್ ಚಾಲಕನಿಂದ ಫೋನ್ ಪೇ ಮೂಲಕ  ಪಿಎಸ್ಐ 7 ಸಾವಿರ ರೂ. ಲಂಚವನ್ನು ಪಡೆದುಕೊಂಡಿದ್ದರು. ಜೀಪ್ ಚಾಲಕ ಕರಿಯಪ್ಪರ ಮೊಬೈಲ್ ನಂಬರಿಗೆ ಪಿಎಸ್‍ಐ ಲಂಚದ ಹಣವನ್ನು ಫೋನ್ ಪೇ ಮಾಡಿಸಿಕೊಂಡದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com