
ಫೋನ್ ಪೇ
ತುಮಕೂರು: ಫೋನ್ ಪೇ ಮೂಲಕ ಲಂಚ ಪಡೆದ ಆರೋಪದಡಿ ಪಿಎಸ್ ಐ ಓರ್ವರನ್ನು ಗಣೇಶನ ಹಬ್ಬದ ದಿನದಂದು ಅಮಾನತುಗೊಳಿಸಲಾಗಿದೆ.
ಜಿಲ್ಲೆಯ ಗುಬ್ಬಿ ಟೌನ್ ಠಾಣೆಯ ಪಿಎಸ್ ಐ ಜ್ಞಾನಮೂರ್ತಿಯನ್ನು ಅಮಾನತುಗೊಳಿಸಿ ತುಮಕೂರು ಎಸ್ಪಿ ರಾಹುಲ್ ಕುಮಾರ್ ಶಹಾಪುರ್ ಆದೇಶಿಸಿದ್ದಾರೆ.
ಕಳೆದ ವಾರ ವಿನಾಕಾರಣ ಮ್ಯಾಕ್ಸಿಕ್ಯಾಬ್ ವೊಂದನ್ನು ತಡೆದು ಚಾಲಕನಿಗೆ ಕಿರುಕುಳ ನೀಡಿದ ಆರೋಪವನ್ನು ಪಿಎಸ್ಐ ಹೊತ್ತಿದ್ದರು. ಕ್ಯಾಬ್ ಚಾಲಕನಿಂದ ಫೋನ್ ಪೇ ಮೂಲಕ ಪಿಎಸ್ಐ 7 ಸಾವಿರ ರೂ. ಲಂಚವನ್ನು ಪಡೆದುಕೊಂಡಿದ್ದರು. ಜೀಪ್ ಚಾಲಕ ಕರಿಯಪ್ಪರ ಮೊಬೈಲ್ ನಂಬರಿಗೆ ಪಿಎಸ್ಐ ಲಂಚದ ಹಣವನ್ನು ಫೋನ್ ಪೇ ಮಾಡಿಸಿಕೊಂಡದ್ದರು.