ರಾಜ್ಯದಲ್ಲಿ ಕೊರೋನಾ ಇಳಿಮುಖ: ಇಂದು 801 ಪ್ರಕರಣ ಪತ್ತೆ; 15 ಸಾವು; 6 ಜಿಲ್ಲೆಗಳಲ್ಲಿ ಪ್ರಕರಣ 'ಶೂನ್ಯ'!

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 801 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,60,931ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 801 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,60,931ಕ್ಕೆ ಏರಿಕೆಯಾಗಿದೆ.

ಮಹಾಮಾರಿಗೆ ಇಂದು 15 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,487ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು 207 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,41,170ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 2 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 1142 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,06,746ಕ್ಕೆ ಏರಿಕೆಯಾಗಿದೆ. ಇನ್ನು16,672 ಸಕ್ರೀಯ ಪ್ರಕರಣಗಳಿವೆ. 

ರಾಜ್ಯಾದ್ಯಂತ ಇಂದು 1,19,503 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 801 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.67ಕ್ಕೆ ಇಳಿದಿದೆ.

ರಾಜ್ಯದ ನಾಲ್ಕು ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಗದಗ, ಹಾವೇರಿ, ರಾಮನಗರ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com