ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ: ಬದಲಿ ವಿಮಾನ ವ್ಯವಸ್ಥೆ

ವಿಮಾನ ಹಾರಾಟ ನಡೆಸುವ ಮುನ್ನ ಚಾಲಕ ನಡೆಸಿದ ಅಂತಿಮ ತಪಾಸಣೆ ವೇಳೆ ತಾಂತ್ರಿಕ ದೋಷ ಪತ್ತೆಯಾಗಿತ್ತು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಬೆಂಗಳೂರಿನಿಂದ ಹೈದರಾಬಾದಿಗೆ ಪ್ರಯಾಣಿಸುತ್ತಿದ್ದ ಅಲಯನ್ಸ್ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನದಲ್ಲಿ ತಾಂತ್ರಿಕ ದೋಷ ಇರುವುದನ್ನು ಚಾಲಕ ಪತ್ತೆ ಹಚ್ಚಿದ್ದು ಸಂಭಾವ್ಯ ಅವಘಡ ತಪ್ಪಿಸಿದ ಘಟನೆ ನಡೆದಿದೆ.

ವಿಮಾನದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಒಟ್ಟು 33 ಮಂದಿ ಪ್ರಯಾಣಿಸುತ್ತಿದ್ದರು. ವಿಮಾನ ಹಾರಾಟ ನಡೆಸುವ ಮುನ್ನ ಚಾಲಕ ನಡೆಸಿದ ಅಂತಿಮ ತಪಾಸಣೆ ವೇಳೆ ತಾಂತ್ರಿಕ ದೋಷ ಪತ್ತೆಯಾಗಿತ್ತು.

ನಂತರ ದೋಷಪೂರಿತ ವಿಮಾನದಿಂದ ಪ್ರಯಾಣಿಕರನ್ನು ಸ್ಥಳಾಂತರಿಸಿ ಬದಲಿ ವಿಮಾನ ವ್ಯವಸ್ಥೆ ಮಾಡಲಾಯಿತೆಂದು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣ ಸಂಸ್ಥೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com