ಉದ್ಯಮಿ ಪುತ್ರನ ಮೇಲೆ ಹಲ್ಲೆ: ಮಾಜಿ ಶಾಸಕ ಮಾನಪ್ಪ ವಜ್ಜಲ್ ಪುತ್ರನ ವಿರುದ್ಧ ಎಫ್ಐಆರ್ ದಾಖಲು

ಮಾಜಿ ಶಾಸಕ ಮಾನಪ್ಪ ವಜ್ಜಲ್ ಪುತ್ರ ಆಂಜನೇಯ ಮಾನಪ್ಪ ವಜ್ಜಲ್ ವಿರುದ್ಧ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಎಫ್​ಐಆರ್​ ದಾಖಲಾಗಿದೆ. 
ಮಾನಪ್ಪ ವಜ್ಜಲ್
ಮಾನಪ್ಪ ವಜ್ಜಲ್

ಬೆಂಗಳೂರು: ಮಾಜಿ ಶಾಸಕ ಮಾನಪ್ಪ ವಜ್ಜಲ್ ಪುತ್ರ ಆಂಜನೇಯ ಮಾನಪ್ಪ ವಜ್ಜಲ್ ವಿರುದ್ಧ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಎಫ್​ಐಆರ್​ ದಾಖಲಾಗಿದೆ.

ಆಂಜನೇಯ ವಜ್ಜಲ್ ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಉದ್ಯಮಿ ದೀಪಕ್​ ರೈ ಅವರ ಪುತ್ರ ವಿಕ್ರಮ್​ ರೈ ಅವರು ದೂರು ನೀಡಿದ್ದಾರೆ.

ರಾಯಚೂರು ಜಿಲ್ಲೆಯ ಲಿಂಗಸಗೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಮಾನಪ್ಪ ವಜ್ಜಲ್ ಪುತ್ರ ಆಂಜನೇಯ, ಪಂಚ್ ಮಾಡುವ ಆಯುಧದಿಂದ ವಿಕ್ರಮ್ ರೈ ಮೇಲೆ ಹಲ್ಲೆ ಮಾಡಿದ್ದಾರೆ. ಆಂಜನೇಯ ಹಾಗೂ ಗ್ಯಾಂಗ್​ ಮೂರು ಕಾರುಗಳಿಂದ ಪಂಚ್ ಆಯುಧ ಹೊರತೆಗೆದು ಭೀಕರ ಹಲ್ಲೆ ನಡೆಸಿದ್ದಾರೆ. 10 ರಿಂದ 15 ಹುಡುಗರನ್ನ ಕರೆಸಿ ಹಲ್ಲೆ ಮಾಡಿದ್ದಾರೆ ಎಂದು ಎಫ್​ಐಆರ್ ನಲ್ಲಿ ಆರೋಪಿಸಲಾಗಿದೆ.

ಕಳೆದ ಭಾನುವಾರ ರಾತ್ರಿ ಅಪಾರ್ಟ್​ಮೆಂಟ್​ನಲ್ಲಿ ಕಾರು ಪಾರ್ಕಿಂಗ್​ ವಿಚಾರಕ್ಕೆ ವಿಕ್ರಮ್​ ರೈ ಮತ್ತು ಆಂಜನೇಯ ವಜ್ಜಲ್​ ನಡುವೆ ಹೊಡೆದಾಟ ನಡೆದಿದೆ. ಈ ಗಲಾಟೆಯಲ್ಲಿ ವಿಕ್ರಮ್​ ರೈ ಕಣ್ಣಿನ ಮೇಲ್ಭಾಗಕ್ಕೆ ಗಾಯವಾಗಿದೆ. 

ಈ ಪ್ರಕರಣ ಸಂಬಂಧ ಹೈ ಗ್ರೌಂಡ್ ಪೊಲೀಸ್​ ಠಾಣೆಯಲ್ಲಿ ಆಂಜನೇಯ ವಜ್ಜಲ್​ ಮತ್ತು ವನೀಶ್​ ವಜ್ಜಲ್​ ಸಹ ದೂರು ದಾಖಲಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ವಿಕ್ರಮ್​ ರೈ ಸಹ ಠಾಣೆಯಲ್ಲಿ ದೂರು ನೀಡಿದ್ದು, ಈಗ ಶಾಸಕನ ಪುತ್ರನ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com