ರಾಜ್ಯದಲ್ಲಿ ಇನ್ನೂ ಎರಡು, ಮೂರು ದಿನ ಮಳೆ ಕಾಟ, ಎಚ್ಚರ

ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಸೆಪ್ಟೆಂಬರ್ ತಿಂಗಳ ಆರಂಭದಿಂದಲೂ ಕೆಲ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಸೆಪ್ಟೆಂಬರ್ ತಿಂಗಳ ಆರಂಭದಿಂದಲೂ ಕೆಲ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ.

ಕಳೆದ 15 ದಿನಗಳಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಗುರುವಾರ ಮಳೆಯ ಆರ್ಭಟ ಕಡಿಮೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಹೇಳಿದೆ.

ಇಲಾಖೆ ವರದಿಯ ಪ್ರಕಾರ ಇದೇ 18 ರಿಂದ 21ರ ವರೆಗೂ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 

ರಾಜ್ಯದಲ್ಲಿ ಇಂದು ಮತ್ತು ನಾಳೆ ಮಳೆ ಮುಂದುವರೆಯಲಿದ್ದು, ಶನಿವಾರ ಹಾಗೂ ಭಾನುವಾರ ವರುಣನ ಅಬ್ಬರ ಹೆಚ್ಚಾಗಲಿದೆ ಎಂದೂ ವರದಿ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com