ಐವರು ಆತ್ಮಹತ್ಯೆ ಪ್ರಕರಣ: ಶಂಕರ್ ಮನೆಯಲ್ಲಿ 15 ಲಕ್ಷ ನಗದು, ಚಿನ್ನಾಭರಣ ಪತ್ತೆ!

ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಭಾನುವಾರ ಪೊಲೀಸರು ಸ್ಥಳ ಮಹಜರು ಮುಗಿಸಿದ್ದು, ಈ ವೇಳೆ ಹಲವು ಪ್ರಮುಖ ಸಾಕ್ಷ್ಯಗಳು  ಪತ್ತೆಯಾಗಿವೆ ಎಂದು ಪೊಲೀಸ್ ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ತಿಗಳರಪಾಳ್ಯದ ಮನೆಯ ಚಿತ್ರ
ತಿಗಳರಪಾಳ್ಯದ ಮನೆಯ ಚಿತ್ರ
Updated on

ಬೆಂಗಳೂರು: ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಭಾನುವಾರ ಪೊಲೀಸರು ಸ್ಥಳ ಮಹಜರು ಮುಗಿಸಿದ್ದು, ಈ ವೇಳೆ ಹಲವು ಪ್ರಮುಖ ಸಾಕ್ಷ್ಯಗಳು  ಪತ್ತೆಯಾಗಿವೆ ಎಂದು ಪೊಲೀಸ್ ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ತಿಗಳರಪಾಳ್ಯದ  ಮನೆಯಲ್ಲಿ ಎಸಿಪಿ, ಇನ್‍ಸ್ಪೆಕ್ಟರ್ ಗಳ ನೇತೃತ್ವದಲ್ಲಿಇಂದು ಸ್ಥಳ ಮಹಜರು ನಡೆದಿದ್ದು, ಈ  ವೇಳೆ ಮೂವರ ಡೆತ್ ನೋಟ್ ಪತ್ತೆಯಾಗಿವೆ. ಅಲ್ಲದೇ, ಮನೆಯಲ್ಲಿ 15 ಲಕ್ಷ ರೂ.ನಗದು, ಎರಡು  ಕೆ.ಜಿ.ಯಷ್ಟು ಚಿನ್ನಾಭರಣ ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.

ಸುಮಾರು  ಹತ್ತಕ್ಕೂ ಹೆಚ್ಚು ಅಧಿಕಾರಿಗಳು ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮನೆ  ಮಾಲೀಕ ಶಂಕರ್, ಇಬ್ಬರು ಅಳಿಯಂದಿರು, ಒಬ್ಬ ಸಂಬಂಧಿಕ ಸಹ ಉಪಸ್ಥಿತರಿದ್ದರು. ಪೊಲೀಸರು  ಕೀ ಮೇಕರ್ ನನ್ನು ಕರೆಸಿ, ಲಾಕರ್ ತೆಗೆಸಿದ್ದಾರೆ. ಅಲ್ಲದೇ ತಪಾಸಣೆ ವೇಳೆ ಮನೆಯ  ರೂಮ್‍ಗಳಲ್ಲಿ ಅಲ್ಲಲ್ಲಿ ನೋಟುಗಳು ಹರಿದು ಬಿದ್ದಿದ್ದವು ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com