ಬೆಂಗಳೂರು ವಕೀಲರ ಸಂಘಕ್ಕೆ ಆಡಳಿತಾಧಿಕಾರಿಯಾಗಿ ಜಿಲ್ಲಾಧಿಕಾರಿ ಮಂಜುನಾಥ್‌ ನೇಮಕ

ಬೆಂಗಳೂರು ವಕೀಲರ ಸಂಘದ ಹಾಲಿ ಕಾರ್ಯಕಾರಿ ಸಮಿತಿಯ ಅಧಿಕಾರವಧಿ ಪೂರ್ಣಗೊಂಡಿದ್ದರೂ ಅದಕ್ಕೆ ಚುನಾವಣೆ ನಡೆಯದ ಹಿನ್ನೆಲೆಯಲ್ಲಿ ಸಂಘದ ಕಾರ್ಯ ಚಟುವಟಿಕೆ ನಿರ್ವಹಿಸಲು ನಗರ ಜಿಲ್ಲಾಧಿಕಾರಿ ಮಂಜುನಾಥ್‌ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಬೆಂಗಳೂರು ವಕೀಲರ ಸಂಘದ ಹಾಲಿ ಕಾರ್ಯಕಾರಿ ಸಮಿತಿಯ ಅಧಿಕಾರವಧಿ ಪೂರ್ಣಗೊಂಡಿದ್ದರೂ ಅದಕ್ಕೆ ಚುನಾವಣೆ ನಡೆಯದ ಹಿನ್ನೆಲೆಯಲ್ಲಿ ಸಂಘದ ಕಾರ್ಯ ಚಟುವಟಿಕೆ ನಿರ್ವಹಿಸಲು ನಗರ ಜಿಲ್ಲಾಧಿಕಾರಿ ಮಂಜುನಾಥ್‌ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

ವಕೀಲ ಎ ಪಿ ರಂಗನಾಥ್ ಅಧ್ಯಕ್ಷತೆಯ ಕಾರ್ಯಕಾರಿ ಸಮಿತಿಯ ಅವಧಿ 2021ರ ಜನವರಿ 23ಕ್ಕೆ ಪೂರ್ಣಗೊಂಡಿತ್ತು. ಅವಧಿ ಪೂರ್ಣಗೊಂಡ ನಂತರವೂ ಚುನಾವಣೆ ನಡೆಯದ ಹಿನ್ನೆಲೆಯಲ್ಲಿ ಆಡಳಿತಾಧಿಕಾರಿಯನ್ನು ನೇಮಕ ಮಾಡಲಾಗಿದೆ.

ಬೆಂಗಳೂರು ವಕೀಲರ ಸಂಘದಲ್ಲಿ 20 ಸಾವಿರಕ್ಕೂ ಅಧಿಕ ನೋಂದಾಯಿತ ವಕೀಲರಿದ್ದಾರೆ. ಅದರ ಕಾರ್ಯಕಾರಿ ಸಮಿತಿ ಅಧ್ಯಕ್ಷ, ಕಾರ್ಯದರ್ಶಿ ಮತ್ತು ಖಜಾಂಚಿ ಸೇರಿ 29 ಸದಸ್ಯರನ್ನು ಒಳಗೊಂಡಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com