ಆನೇಕಲ್: ಎರಡು ಕಾರುಗಳ ನಡುವೆ ಭೀಕರ ಅಪಘಾತ; ಇಬ್ಬರ ದುರ್ಮರಣ

ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಮೃತಪಟ್ಟಿರುವ ಘಟನೆ ಕರ್ನಾಟಕದ ಗಡಿಯ ಹೊಸೂರು ಬಳಿ ಸಂಭವಿಸಿದೆ.
ಅಪಘಾತದ ದೃಶ್ಯ
ಅಪಘಾತದ ದೃಶ್ಯ
Updated on

ಆನೇಕಲ್: ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಮೃತಪಟ್ಟಿರುವ ಘಟನೆ ಕರ್ನಾಟಕದ ಗಡಿಯ ಹೊಸೂರು ಬಳಿ ಸಂಭವಿಸಿದೆ.

ಹೊಸೂರು ಸಮೀಪದ ಸೂಳಗಿರಿ ಎಚ್.ಪಿ  ಪೆಟ್ರೋಲ್ ಬಂಕ್ ಎದುರು ಭೀಕರ ಅಪಘಾತ ಸಂಭವಿಸಿದ್ದು, ಕಾರು ಚಾಲಕರು  ಸಾವನ್ನಪ್ಪಿದ್ದಾರೆ. ಬೆಂಗಳೂರಿನ ವೈಯಾಲಿಕಾವಲ್ ನಿವಾಸಿ 21 ವರ್ಷದ ಸುಮಂತ್ ಮತ್ತು ಕೋರಮಂಗಲ ನಿವಾಸಿ 34 ವರ್ಷದ ವಿನ್ಸೆಂಟ್ ಗೋಪಿ ಮೃತ ದುರ್ದೈವಿಗಳು.

ಇಂಡಿಕಾ ಕಾರಿಗೆ ರಾಂಗ್ ರೂಟ್ ನಲ್ಲಿ ಬಂದ ಸ್ಕೋಡಾ ಕಾರು ಡಿಕ್ಕಿ ಹೊಡೆದಿದೆ. ಮೃತದೇಹಗಳನ್ನು ಹೊಸೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಸುಮಂತ್ ಎಂಬ ಕಾರು ಚಾಲಕ 30 ಅಡಿ ದೂರ ಹೋಗಿ ಬಿದ್ದಿದ್ದಾರೆ. 

ಅಪಘಾತ ಸ್ಥಳಕ್ಕೆ ಸೂಳಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com