ಬೆಂಗಳೂರು: ಕುಳ್ಳ ವೆಂಕಟೇಶ್ ಭೀಕರ ಹತ್ಯೆ; ಸಿಸಿಟಿವಿಯಲ್ಲಿ ‌ದೃಶ್ಯ ಸೆರೆ

ಇತ್ತೀಚೆಗೆ ಬೆಂಗಳೂರು ಹೊರವಲಯದ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕುಳ್ಳ ವೆಂಕಟೇಶ್ ಹತ್ಯೆಯ ಭೀಕರ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೆಚ್ಚಿಬೀಳುಸುವಂತಿದೆ.
ಸಿಸಿಟಿವಿ ದೃಶ್ಯ
ಸಿಸಿಟಿವಿ ದೃಶ್ಯ

ಕೆ.ಆರ್ ಪುರಂ(ಬೆಂಗಳೂರು): ಇತ್ತೀಚೆಗೆ ಬೆಂಗಳೂರು ಹೊರವಲಯದ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕುಳ್ಳ ವೆಂಕಟೇಶ್ ಹತ್ಯೆಯ ಭೀಕರ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೆಚ್ಚಿಬೀಳುಸುವಂತಿದೆ.

ಸೆಪ್ಟೆಂಬರ್ 25ರಂದು ಕುಳ್ಳ ವೆಂಕಟೇಶ್, ರಾಮಮೂರ್ತಿನಗರದ ತಮ್ಮ ನಿವಾಸದಿಂದ ದ್ವಿಚಕ್ರ ವಾಹನದಲ್ಲಿ ಜಮೀನು ನೋಡಲು ತೆರಳುತ್ತಿದ್ದಾಗ ಆರು ಜನ ದುಷ್ಕರ್ಮಿಗಳು ಆಟೋ ಮತ್ತು ದ್ವಿಚಕ್ರ ವಾಹನದಲ್ಲಿ ಬಂದು ವೆಂಕಟೇಶ್ ಬೈಕ್​​ಗೆ ಡಿಕ್ಕಿ ಹೊಡೆದಿದ್ದರು.

ನಂತರ ಅವರು ನೆಲಕ್ಕೆ ಬಿದ್ದಾಗ ಈ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದರು. ಘಟನೆಯ ಸಂಪೂರ್ಣ ದೃಶ್ಯಗಳು ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಅನಿಲ್ ಸೇರಿ ನಾಲ್ವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಜಮೀನು ವಿಚಾರಕ್ಕೆ ಕುಳ್ಳ ವೆಂಕಟೇಶ್​​‌ನನ್ನು ಅನಿಲ್ ಮತ್ತು ಆತನ ಸಹಚರರು ಸೇರಿಕೊಂಡು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com