ಬೆಂಗಳೂರು: ಯುವಕ-ಯುವತಿಯ ವಿಡಿಯೋ ಮಾಡಿ ಬೆದರಿಕೆ; ಐವರ ಬಂಧನ

ಮೈಸೂರು ಜಿಲ್ಲೆಯಲ್ಲಿ ಸಾಮೂಹಿಕ ಅತ್ಯಾಚಾರದ ಕಹಿ ಘಟನೆ ಮಾಸುವ ಮುನ್ನವೇ ಬೆಂಗಳೂರು ಹೊರವಲಯದಲ್ಲಿ ಏಕಾಂತಕ್ಕೆ ಹೋದವರ ಮೇಲೆ ದೌರ್ಜನ್ಯ ಮಾಡಿ ಬೆದರಿಕೆ ಹಾಕಲಾಗಿತ್ತು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮೈಸೂರು ಜಿಲ್ಲೆಯಲ್ಲಿ ಸಾಮೂಹಿಕ ಅತ್ಯಾಚಾರದ ಕಹಿ ಘಟನೆ ಮಾಸುವ ಮುನ್ನವೇ ಬೆಂಗಳೂರು ಹೊರವಲಯದಲ್ಲಿ ಏಕಾಂತಕ್ಕೆ ಹೋದವರ ಮೇಲೆ ದೌರ್ಜನ್ಯ ಮಾಡಿ ಬೆದರಿಕೆ ಹಾಕಲಾಗಿತ್ತು.

ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂದೇನಹಳ್ಳಿ ಗ್ರಾಮದಸಯ್ಯದ್ ಆಸಿಫ್ ಫಾಷಾ , ನವಾಜ್ ಪಾಷ, ಲಿಯಾಖತ್ ಪಾಷಾ, ಸಲ್ಮಾನ್ ಖಾನ್, ರೂಹಿದ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಇದೇ ತಿಂಗಳ 25 ರಂದು ಬೆಳಗ್ಗೆ 11 ಗಂಟೆಗೆ ಯುವತಿ ತನ್ನ ಸಂಬಂಧಿಯೊಂದಿಗೆ ಅನುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹಂದೇನಹಳ್ಳಿ ಗ್ರಾಮದ ಖಾಸಗಿ ಲೇಔಟ್​ಗೆ ತೆರಳಿದ್ದರು.

ಬಂಧಿತ ಆರೋಪಿಗಳು
ಬಂಧಿತ ಆರೋಪಿಗಳು

ಬಳಿಕ ಕಾರಿನಲ್ಲಿ ಕೂತು ಸ್ನ್ಯಾಕ್ಸ್ ಮತ್ತು ತಂಪು ಪಾನೀಯ ಸೇವಿಸಿದ್ದರು. ಆಗ ಬೆಳಿಗ್ಗೆ 11.30ರ ಹೊತ್ತಿಗೆ ಕೀಚಕರ ಗುಂಪೊಂದು ಅಲ್ಲಿಗೆ ಬಂದಿದ್ದು, ಯುವತಿ-ಯುವಕನನ್ನು ವಿಡಿಯೋ ಮಾಡಿ ಬೆದರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com